Advertisement

ಕಡಬ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

10:12 AM Sep 01, 2020 | Mithun PG |

ಕಡಬ: ಕೊಂಬಾರು ಗ್ರಾಮದ ಕೆಂಜಾಳ ಪುತ್ತಿಲ ಎಂಬಲ್ಲಿ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.

Advertisement

ಘಟನೆ ನಡೆದ ಪ್ರದೇಶವು ಬಿಳಿನೆಲೆ ಮತ್ತು ಕೊಂಬಾರು ಗ್ರಾಮದ ಗಡಿ ಪ್ರದೇಶವಾಗಿದೆ. ಕಾಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವುದು ಬೆಳಗ್ಗೆ 5 ಗಂಟೆ ವೇಳೆಗೆ ಸ್ಥಳಿಯರ ಗಮನಕ್ಕೆ ಬಂದಿದೆ,

ಕೂಡಲೇ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ, ಇದೀಗ ಸ್ಥಳಕ್ಕೆ ಸುಬ್ರಹ್ಮಣ್ಯ ಆರಣ್ಯ ವಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಿನಲ್ಲಿ ಆಹಾರ ಅರಸಿಕೊಂಡು ಬಂದಿರುವ ವೇಳೆ ನಿನ್ನೆ ರಾತ್ರಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next