Advertisement

ಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

01:29 AM Jan 23, 2022 | Team Udayavani |

ಉಪ್ಪಿನಂಗಡಿ: ಉದನೆ ಪೇಟೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜ. 21ರಂದು ಬೆಳ್ಳಂಬೆಳಗ್ಗೆ ಒಂಟಿ ಸಲಗ ಓಡಾಟ ನಡೆಸಿದ್ದು, ವಾಹನ ಚಾಲಕರು ಮತ್ತು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

Advertisement

ಹೆದ್ದಾರಿ ಅಂಚಿನಲ್ಲಿರುವ ಶಿರಾಡಿ ರಕ್ಷಿತಾರಣ್ಯದಿಂದ ಬಂದ ಕಾಡಾನೆ ಉದನೆ ಪೇಟೆಯಿಂದ ತುಸು ದೂರದಲ್ಲಿ ಹೆದ್ದಾರಿಯ ದಾಟಿ ಗುಂಡ್ಯ ಹೊಳೆಯ ಕಡೆಗೆ ಸಂಚರಿಸಿದೆ. ಆನೆ ಹೆದ್ದಾರಿಗೆ ಬರುತ್ತಿದ್ದಂತೆ ದ್ವಿಚಕ್ರ ಮತ್ತು ಘನ ವಾಹನ ಚಾಲಕರು ಅಚ್ಚರಿಗೊಂಡಿದ್ದು, ಸಂಚಾರ ಸ್ಥಗಿತಗೊಳಿಸಿ ಮೊಬೈಲ್‌ಗ‌ಳಲ್ಲಿ ಫೋಟೋ, ವೀಡಿಯೋ ಸೆರೆಹಿಡಿದಿದ್ದಾರೆ.

ವಾಹನ ಸವಾರರು, ಜನರು ಭಯಭೀತರಾಗಿದ್ದರೂ ಆನೆ ಮಾತ್ರ ಏನೂ ಹಾನಿ ಮಾಡದೆ ಗುಂಡ್ಯ ಹೊಳೆ ಕಡೆಗೆ ತನ್ನಪಾಡಿಗೆ ತೆರಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆ ಶಿರಾಡಿ, ಪೆರಿಯಶಾಂತಿ, ಉದನೆ ಭಾಗದಲ್ಲಿ ಕಾಡಾನೆಗಳು ಪದೇ ಪದೆ ತೋಟಗಳಿಗೆ ನುಗ್ಗಿ ಹಾನಿ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next