Advertisement

Elephants: ಬಂಡೀಪುರ ರಸ್ತೆಯಲ್ಲಿ ಕುಂಟುತ್ತ ಸಾಗಿದ ಮರಿಯಾನೆ

02:43 PM Aug 20, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಮರಿಯಾನೆಯೊಂದರ ಎಡಗಾಲಿಗೆ ಗಂಭೀರ ಗಾಯವಾಗಿ ಕುಂಟುತ್ತ ರಸ್ತೆ ದಾಟಿದ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಹೆದ್ದಾರಿ ರಸ್ತೆಯಲ್ಲಿ ನಡೆದಿದ್ದು, ಈ ದೃಶ್ಯವನ್ನು ಪ್ರವಾಸಿಗರೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

Advertisement

ಬಂಡೀಪುರದಿಂದ ಊಟಿಗೆ ತೆರಳುವ ಮಾರ್ಗ ಮಧ್ಯೆ ರಸ್ತೆಯಲ್ಲಿ ಮರಿಯಾನೆಯೊಂದು ತಾಯಿ ಮತ್ತು ಇತರೆ ಎರಡು ಆನೆಗಳ ಜೊತೆ ರಸ್ತೆ ದಾಟಿದೆ. ಈ ವೇಳೆ ಮರಿಯಾನೆ ಕಾಲು ನೋವಿನಿಂದ ಬಳಲುತ್ತಿದ್ದ ಹಿನ್ನಲೆ ಕುಂಟುತ್ತ ಸಾಗಿದೆ ಎನ್ನಲಾಗುತ್ತಿದೆ. ಆದರೆ ಆನೆ ಕುಂಟುತ್ತ ತೆರಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡ ಮರಿಯಾನೆಗೆ ಚಿಕಿತ್ಸೆಯ ಅಗತ್ಯವಿದೆ.

ಈ ಬಗ್ಗೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ ಕುಮಾರ್ ಪ್ರತಿಕ್ರಿಯೆ ನೀಡಿ, ಮರಿಯಾನೆ ಕುಂಟುತ್ತ ರಸ್ತೆ ದಾಟಿರುವ ಕುರಿತು ಪರಿಶೀಲನೆ ನಡೆಸಿ ಕ್ರಮ ವಹಿಸುವಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next