Advertisement

Elimale: ಇಲಿ ಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

10:09 PM Dec 15, 2023 | Team Udayavani |

ಗುತ್ತಿಗಾರು: ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೋರ್ವ ಇಂದು(ಡಿ. ೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲಿಮಲೆಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶಮಂತ್‌ ಎಂದು ಗುರುತಿಸಲಾಗಿದೆ.

Advertisement

ನೆಲ್ಲೂರು ಕೇಮ್ರಾಜೆ ಗ್ರಾಮದ ಎಲಿಮಲೆ ಸಮೀಪದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿಣ ವಾಸುದೇವ ಎಂಬವರ ಪುತ್ರ, ಶಮಂತ್‌ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಕೂಡ ಶಮಂತ್‌ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಹಲವಾರು ಮಂದಿ ಆತನ ಚಿಕಿತ್ಸೆಗಾಗಿ ನೆರವು ನೀಡಿದ್ದರು. ಇದೀಗ ಮತ್ತೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next