Advertisement

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

07:03 PM Oct 16, 2024 | Team Udayavani |

ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ಅವರ ಪುತ್ರ ಅಭಿಮನ್ಯು ನಟಿಸಿರುವ ಚಿತ್ರ “ಎಲ್ಲಿಗೆ ಪಯಣ ಯಾವುದೋ ದಾರಿ’ ಅಕ್ಟೋಬರ್‌ 25ರಂದು ತೆರೆಕಾಣುತ್ತಿದೆ.

Advertisement

ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಅನ್ನು ನಟ ಸುದೀಪ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ನಾಯಕ ನಟ ಅಭಿಮನ್ಯು ಮಾತನಾಡಿ, ನಿರ್ದೇಶಕರು ತುಂಬಾ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಆರಂಭದಲ್ಲಿ ಕಥೆ ಹೇಳಿದಂತೆ ಸಿನಿಮಾ ಮಾಡಿದ್ದಾರೆ ಎಂದರು.

ಸುದರ್ಶನ ಆರ್ಟ್ಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ಜತಿನ್‌ ಪಟೇಲ್‌ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಸ್ಫೂರ್ತಿ ಉಡಿಮನೆ ನಟಿಸಿದ್ದು, ಚಿತ್ರದ ಕುರಿತಾದ ಅನುಭವದ ಬಗ್ಗೆ ಮಾತನಾಡಿದರು. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್‌ ಎಸ್‌ ಸೂರ್ಯ ನಿರ್ದೇಶನ ಮಾಡಿದ್ದಾರೆ.

ಚಿತ್ರದಲ್ಲಿ ವಿಜಯ ಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್‌, ಅಯಾಂಕ್‌, ರಿನಿ ಬೋಪಣ್ಣ, ಪ್ರದೀಪ್‌, ರವಿತೇಜ, ಕಿಶೋರ್‌, ಅಶ್ವಿ‌ನಿ ರಾವ್‌, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್‌ ರಾವ್‌ ಸಂಗೀತ ನಿರ್ದೇಶನ, ಸತ್ಯ ರಾಮ್‌ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್‌ ಮರವಂತೆ ಸಾಹಿತ್ಯವಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next