Advertisement
ಗುರುವಾರ ನಿಯಮ 72ರ ಅಡಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ನ ಯು.ಬಿ. ವೆಂಕಟೇಶ್, ವಿಶ್ವೇಶ್ವರ ದೇವಸ್ಥಾನದಲ್ಲಿ ಪುರಾತನ ಕಾಲದಿಂದಲೂ ಸಂಪ್ರದಾಯಗಳು ನಡೆದುಕೊಂಡು ಬಂದಿವೆ. ಆದರೆ, ಕಳೆದೆರಡು ವರ್ಷಗಳಿಂದ ಪ್ರಸ್ತುತ ವ್ಯವಸ್ಥಾಪನ ಸಮಿತಿಯು ಆಚರಣೆಗಳನ್ನು ಕೈಬಿಟ್ಟಿದೆ ಎಂದು ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ಸಭಾ ನಾಯಕರು, ಉದ್ದೇಶಿತ ದೇವಸ್ಥಾನದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದ ವಿಚಾರದಲ್ಲಿ ಎರಡು ಸಮುದಾಯಗಳಲ್ಲಿ ತಗಾದೆ ಇತ್ತು. ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಗ ಸೂಕ್ತ ತೀರ್ಮಾನ ಆಗುವವರೆಗೂ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ತೀರ್ಮಾನಿಸಲಾಯಿತು. ವ್ಯವಸ್ಥಾಪನ ಸಮಿತಿಯು ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇನೇ ಇರಲಿ, ಈ ವಿಚಾರದಲ್ಲಿ ಆದಷ್ಟು ಬೇಗ ಸೂಕ್ತ ತೀರ್ಮಾನ ಕೈಗೊಂಡು ಆಚರಣೆಗಳನ್ನು ಮುನ್ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಅಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು ಎಂದು ಹೇಳಿದರು.