Advertisement
ಸುತ್ತು ಬಳಸಿ ಸಂಚಾರ ಎಳ್ಳಾರೆಯಿಂದ ಮುನಿಯಾಲು, ಕಡ್ತಲ, ಕುಕ್ಕುಜೆ, ಪೆರ್ಡೂರು, ಶಿವಪುರ, ಪಡುಕುಡೂರು ಗ್ರಾಮಗಳನ್ನು ಸಂಪರ್ಕಿ ಸಲು ರಸ್ತೆ, ಸೇತುವೆ ನಿರ್ಮಾಣ ವಾಗಿದ್ದರೂ ಬಸ್ ವ್ಯವಸ್ಥೆ ಇಲ್ಲದೆ ಈ ಎಲ್ಲ ಗ್ರಾಮಗಳಿಗೆ ಸುತ್ತುಬಳಸಿ ನಾಗರಿಕರು ಸಂಚರಿಸುವಂತಾಗಿದೆ.
Related Articles
ಎಳ್ಳಾರೆಯಲ್ಲಿ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆ ಮಾತ್ರ ಇದ್ದು ಪ್ರೌಢ ಶಿಕ್ಷಣ, ಪದವಿಪೂರ್ವ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣಕ್ಕೆ ದೂರದ ಊರುಗಳಾದ ಮುನಿಯಾಲು, ದೊಂಡೇರಂಗಡಿ, ಪೆರ್ಡೂರಿಗೆ ತೆರಳಬೇಕಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇಲ್ಲದೆ ನಡೆದುಕೊಂಡೇ ಹೋಗಬೇಕು.
ಎಳ್ಳಾರೆ ಗ್ರಾಮದ ಮೂಲಕ ದಶಕಗಳ ಹಿಂದೆ ಖಾಸಗಿ ಬಸ್ಸೊಂದು ಓಡಾಟ ನಡೆಸುತ್ತಿತ್ತು. ಪ್ರತಿದಿನ ಬೆಳಗ್ಗೆ 8.00 ಗಂಟೆಗೆ ಹಾಗೂ ಮಧ್ಯಾಹ್ನ 12.30ಕ್ಕೆ ಸಂಚರಿಸುತ್ತಿತ್ತು. ಆದರೆ ಅನಂತರದ ದಿನಗಳಲ್ಲಿ ಖಾಸಗಿ ಬಸ್ ಮಾಲಕರು ಸಂಚಾರ ಸ್ಥಗಿತ ಗೊಳಿಸಿದ್ದಾರೆ. ಹಾಗಾಗಿ ಈ ಗ್ರಾಮಕ್ಕೆ ಶಾಶ್ವತವಾಗಿ ಬಸ್ ಸೌಕರ್ಯ ಬೇಕಾಗಿರುವುದರಿಂದ ಸರಕಾರಿ ಬಸ್ ಓಡಾಟ ನಡೆಸಬೇಕು ಎಂಬುದು ಸ್ಥಳೀಯರ ಆಶಯ.
Advertisement
ಹಲವು ಬಾರಿ ಮನವಿಉಡುಪಿ, ಕೊಳಲಗಿರಿ, ಪೆರ್ಡೂರು, ಕುಂಟಲ್ಕಟ್ಟೆ, ಎಳ್ಳಾರೆ ಮಾರ್ಗವಾಗಿ ಪಡುಕುಡೂರು, ಮುನಿಯಾಲು, ಮುಟ್ಲುಪಾಡಿ ಸಂಪರ್ಕ ಕಲ್ಪಿಸುವಂತೆ ರಾಜ್ಯ ಸರಕಾರಿ ಸಾರಿಗೆ ಬಸ್ ಒದಗಿಸುವಂತೆ ಸಾರಿಗೆ ನಿಗಮಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಿದ್ದೇನೆ. ಜಿ.ಪಂ. ಸಭೆಯಲ್ಲಿಯೂ ಪ್ರಸ್ತಾವನೆ ಮಾಡಲಾಗಿದೆ. ಬಸ್ ಸಂಪರ್ಕದ ವ್ಯವಸ್ಥೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿರುವ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
– ಜ್ಯೋತಿ ಹರೀಶ್, ಜಿ.ಪಂ. ಸದಸ್ಯರು ಸಂಚಾರಕ್ಕೆ ಸಂಕಷ್ಟ
ಗ್ರಾಮಕ್ಕೆ ಬಸ್ ಸೌಕರ್ಯ ಇಲ್ಲದೆ ಸ್ಥಳೀಯ ಗ್ರಾಮಸ್ಥರಿಗೆ ಹಾಗೂ ಸುತ್ತಲ ಗ್ರಾಮಸ್ಥರಿಗೆ ಸಂಚಾರಕ್ಕೆ ಸಂಕಷ್ಟಪಡುವಂತಾಗಿದೆ. ಈಗಾಗಲೇ ಹಲವು ಬಾರಿ ಪ್ರಾದೇಶಿಕ ಸಾರಿಗೆ ಇಲಾಖೆಗೆ ಮನವಿ ಮಾಡಿದರೂ ನಿಷ್ಪ್ರಯೋಜಕವಾಗಿದೆ.
– ಸತೀಶ್ ಪೂಜಾರಿ, ಗ್ರಾ.ಪಂ. ಸದಸ್ಯರು – ಜಗದೀಶ್ ರಾವ್ ಅಂಡಾರು