Advertisement

ಹೈದರಾಬಾದ್ ಗ್ಯಾಂಗ್ ರೇಪ್: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ, ಜನಸೇನಾ ಆಕ್ರೋಶ

02:28 PM Jun 04, 2022 | Team Udayavani |

ಹೈದರಾಬಾದ್ : ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಅವರು ಸಿಎಂ ಕೆ ಚಂದ್ರಶೇಖರ ರಾವ್ ಅವರಿಗೆ ಪತ್ರ ಬರೆದು ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತು ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement

ಅತ್ಯಾಚಾರ ಘಟನೆಯ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಜುಬ್ಲಿ ಹಿಲ್ಸ್ ಪಿಎಸ್‌ನಲ್ಲಿ ಜನಸೇನಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಹಲವರನ್ನು ವಶಕ್ಕೆ ಪಡೆದ ಪೊಲೀಸರು ಗೋಶಾಮಹಲ್ ಪೊಲೀಸ್ ಕೇಂದ್ರಕ್ಕೆ ಸ್ಥಳಾಂತರಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಪೈಕಿ ಇದುವರೆಗೆ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರಲ್ಲಿ ಓರ್ವ 18 ವರ್ಷದ ಸಾದುದ್ದೀನ್ ಮಲಿಕ್‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಟಿಆರ್ ಎಸ್ ನಾಯಕನ ಕಾರಿನಲ್ಲಿ ನಡೆದಿತ್ತು ಹೈದರಾಬಾದ್ ಬಾಲಕಿಯ ಗ್ಯಾಂಗ್ ರೇಪ್!

ಟಿಆರ್ ಎಸ್ ನಾಯಕನೊಬ್ಬನ ಕಾರು ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ ಎನ್ನುವ ವಿಚಾರ ಪ್ರಕರಣ ರಾಜಕೀಯ ಸಂಘರ್ಷಕ್ಕೆತಿರುಗಲು ಕಾರಣವಾಗಿದ್ದು, ತೆಲಂಗಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next