Advertisement

ಅವಕಾಶ ಸಿಕ್ಕರೆ ಕನಸಿನ ಯೋಜನೆಗಳ ಸಾಕಾರ

12:27 AM Apr 09, 2019 | Team Udayavani |

ಬೆಂಗಳೂರು: ಮುಂದಿನ ಆರೇಳು ತಿಂಗಳು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ಸಿಕ್ಕರೆ ನನ್ನ ಕನಸಿನ ಯೋಜನೆಗಳನ್ನು ಸಾಕಾರಗೊಳಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಸೋಮವಾರ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಯಶವಂತಪುರ, ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇ ಔಟ್‌ ವ್ಯಾಪ್ತಿಯ ಪ್ರದೇಶಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯಥಿ ಕೃಷ್ಣ ಬೈರೇಗೌಡರ ಪರ ಪ್ರಚಾರ ನಡೆಸಿ ಮತಯಾಚನೆ ಮಾಡಿದ ಅವರು, ಕಳೆದ ಹತ್ತು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಎಲ್ಲಿ ಎಡವಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭೆ ಚುನಾವಣೆ ನಂತರ ಮುಂದಿನ ಆರು ತಿಂಗಳಲ್ಲಿ ಅದನ್ನು ಸರಿಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ 1.20 ಲಕ್ಷ ಕೋಟಿ ರೂ. ಯೋಜನೆ ರೂಪಿಸಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂದೆ ಯಾವ ಸರ್ಕಾರವೂ ವೆಚ್ಚ ಮಾಡಿರಲಿಲ್ಲ. ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೆರಿಫೆರಲ್‌ ರಿಂಗ್‌ ರಸ್ತೆ, ಎಲಿವೇಟೆಡ್‌ ಕಾರಿಡಾರ್‌, ಸಬ್‌ ಅರ್ಬನ್‌ ರೈಲು ಯೋಜನೆಗೆ ಒತ್ತು ಕೊಡಲಾಗಿದೆ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಿದ್ದೇನೆ. ನನ್ನ ನಡವಳಿಕೆ ನೋಡಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next