Advertisement

23ರಿಂದ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತುಎಮರ್ಜೆನ್ಸಿ ಚಿಕಿತ್ಸೆ ಮಾತ್ರ

11:54 PM Mar 20, 2020 | Lakshmi GovindaRaj |

ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆಯ ಕ್ರಮವಾಗಿ ಮಾ.23ರಿಂದ ವೈದ್ಯಕೀಯ ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ಚಿಕಿತ್ಸೆ ಮಾತ್ರ ನೀಡಲಿದೆ ಎಂದು ತಿಳಿಸಿದೆ.

Advertisement

ಆಸ್ಪತ್ರೆಗೆ ಬರುವ ಪ್ರತಿಯೊಬ್ಬರನ್ನು ಹೊರಭಾಗದಲ್ಲಿ ಹಾಕಿರುವ ತಾತ್ಕಾಲಿಕ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿ, ನಂತರ ಮುಂದಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಸಂಬಂಧಿಸಿದ ವೈದ್ಯರೊಂದಿಗೆ ಚಿಕಿತ್ಸೆಗೆ ಅವಕಾಶ ನೀಡಲಾಗುವುದು.

ತೀವ್ರ ನಿಗಾ ಘಟಕಗಳಿಗೆ (ಐಸಿಯು) ಪ್ರವೇಶ ಮತ್ತು ಶಸ್ತ್ರಚಿಕಿತ್ಸೆಯ ನಂತರದ ತೀವ್ರ ನಿಗಾ ಘಟಕಗಳ ಪ್ರವೇಶದ ನಿರ್ಬಂಧವನ್ನು ಮುಂದುವರಿ ಸಲಿದೆ. ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿ ಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next