Advertisement

ವಿಕಲಚೇತನರ ಅಭಿವೃದ್ಧಿಗೆ ಒತ್ತು

11:51 AM Jul 19, 2020 | Suhan S |

ಚಿಕ್ಕೋಡಿ: ರಾಜ್ಯದ ವಿಕಲಚೇತನರ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಶೇ 5ರಷ್ಟು ಅನುದಾನ ವಿಕಲಚೇತನರಿಗೆ ಮೀಸಲಿಡಲು ಸರ್ಕಾರ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಶನಿವಾರ ಚಿಕ್ಕೋಡಿ ತಾಲೂಕಿನ ಯಕ್ಸಂಬಾದ ತಮ್ಮ ಕಚೇರಿಯಲ್ಲಿ ವಿಡಿಯೋ ಕಾನ್ಪರೆನ್ಸ್‌ ಮೂಲಕ ವಿಕಲಚೇತನರ ಹಕ್ಕುಗಳ ಅಧಿ ನಿಯಮ-2016ರಡಿ ರಾಜ್ಯ ಸಲಹಾ ಸಮಿತಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ರಾಜ್ಯದ ವಿಲಕಚೇತನರ ಸರ್ವಾಂಗೀಣ ಅಭಿವೃದ್ಧಿ ನಮ್ಮ ಧ್ಯೇಯವಾಗಿದ್ದು, ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ವಿಲಕಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ನೀಡುವುದು, ಶೇ 5ರಷ್ಟು ಅನುದಾನ ಮೀಸಲಿಟ್ಟು ಅವರಿಗೆ ಕೌಶಲ್ಯ ತರಬೇತಿ, ಐಟಿಐ ಮತ್ತು ಡಿಪ್ಲೊಮಾ ಕೋರ್ಸ್‌ನಲ್ಲಿ ವಿಶೇಷ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ನುಡಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಲಾಖೆ ನಿರ್ದೇಶಕರು, ಅಧಿನಿಯಮ ರಾಜ್ಯ ಆಯುಕ್ತರು ಮತ್ತು ರಾಜ್ಯ ಸಲಹಾ ಸಮಿತಿ ಸದಸ್ಯರು ವಿಡಿಯೋ ಕಾನ್ಪರೆನ್ಸ್‌ನಲ್ಲಿ ಪಾಲ್ಗೊಂಡಿದ್ದರು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next