Advertisement

ದೇಶದಲ್ಲಿ ಮಂತ್ರದಡಿ ಎಲ್ಲರ ಏಳಿಗೆಗೆ ಒತ್ತು: ಅಪ್ಪಚ್ಚು

12:16 PM Aug 16, 2019 | Team Udayavani |

ಸೋಮವಾರಪೇಟೆ; ದೇಶದಲ್ಲಿ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಮಂತ್ರದಡಿ ಎಲ್ಲರ ಏಳಿಗೆಗೆ ಶ್ರಮಿಸಲಾಗುತ್ತಿದೆ. ಎಲ್ಲರೂ ಒಂದೇಎಂಬ ತತ್ವದಡಿ ದೇಶ ಮುನ್ನೆಡೆಯುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಹೇಳಿದರು.

Advertisement

ಇಲ್ಲಿಗೆ ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 73ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ವನ್ನು ಕೇಂದ್ರ ಸರಕಾರ ರದ್ದುಗೊಳಿಸಿರುವ ಕ್ರಮ ಸ್ವಾಗತಾರ್ಹವಾದುದು. ಕ್ರಾಂತಿಕಾರಕ ಕ್ರಮಗಳ ಮೂಲಕ ಆಡಳಿñ ‌ ನಡೆಸುತ್ತಿರುವ ಕೇಂದ್ರ ಸರಕಾರ ದೇಶದ ಏಕತೆಯ ವಿಚಾರದಲ್ಲಿ ಬದ್ಧತೆಯನ್ನು ಎತ್ತಿ ಹಿಡಿದಿದೆ ಎಂದರು.

ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಿ.ಎಸ್‌. ಪೊನ್ನಪ್ಪ, ಪ್ರಭಾರ ಪ್ರಾಂಶುಪಾಲರಾದ ಎಚ್.ಕೆ. ಉಮೇಶ್‌ಕುಮಾರ್‌, ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕ ಎಂ.ಎಂ. ಯಶ್ವಂತ್‌ ಕುಮಾರ್‌, ಉಪನ್ಯಾಸಕರು, ಸಹ ಶಿಕ್ಷಕರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next