Advertisement

ಬಿಸಿಯೂಟ ನೌಕರರಿಗೆ ನಾಲ್ಕು ತಿಂಗಳಿಂದ ವೇತನ ಇಲ್ಲ

04:40 PM Aug 11, 2021 | Team Udayavani |

ಚಿಕ್ಕಬಳ್ಳಾಪುರ: ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಬಂದ್‌ ಮಾಡಿದ್ದರಿಂದ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡಿದೆ. ಅಡುಗೆ ಸಿಬ್ಬಂದಿಗೆ
ಕಳೆದ 4 ತಿಂಗಳಿಂದ ವೇತನ ಇಲ್ಲದೆ ಬದುಕಿನ ಬಂಡಿ ನೂಕಲು ಪರದಾಡುವಂತಾಗಿದೆ.

Advertisement

ಜಿಲ್ಲೆಯ ಶಿಡ್ಲಘಟ್ಟ,ಬಾಗೇಪಲ್ಲಿ,ಚಿಕ್ಕಬಳ್ಳಾಪುರ,ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ ತಾಲೂಕುಗಳಲ್ಲಿ 2735 ಅಡುಗೆ ಮಾಡುವ
ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಕಳೆದ ಏಪ್ರಿಲ್‌ ತಿಂಗಳಿಂದ ಅವರಿಗೆ ವೇತನ ಭಾಗ್ಯವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಾಲ ಮಾಡುವ ಪರಿಸ್ಥಿತಿ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡರೂ ಶಾಲೆಯಲ್ಲಿ ದಾಖಲಾದ ಮಕ್ಕಳಿಗೆ ಆಹಾರ ಧಾನ್ಯ ಪೂರೈಕೆ ಮಾಡುವ ಕಾರ್ಯದಲ್ಲಿ ಶಿಕ್ಷಕರೊಂದಿಗೆ ಅಡುಗೆ ಮಾಡುವ ಸಿಬ್ಬಂದಿಯೂ ಕೈಜೋಡಿಸಿದ್ದಾರೆ. ವಿದ್ಯಾರ್ಥಿಗಳ ಮನೆಯ ಬಾಗಿಲಿಗೆ ಸೌಲಭ್ಯವನ್ನು ತಲುಪಿಸುವ ಕಾರ್ಯ ಮಾಡಬೇಕು. ಆದರೂ, ಸರ್ಕಾರ ಕಳೆದ ಏಪ್ರಿಲ್‌ ತಿಂಗಳಿಂದ ಅವರಿಗೆ ವೇತನ ಪಾವತಿಸಿಲ್ಲ. ಇದರಿಂದ ಅಡುಗೆ ಮಾಡುವ ಸಿಬ್ಬಂದಿಯವರು ಕುಟುಂಬ ನಿರ್ವಹಣೆಗಾಗಿ ಸಾಲ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ:ಆನಂದ‌ ಸಿಂಗ್ ಭೇಟಿ ವಿಚಾರದಲ್ಲಿ ಮಾಹಿತಿ ಬಿಟ್ಟು ಕೊಡದ ಸ್ಪೀಕರ್

ಮಧ್ಯಾಹ್ನದ ಬಿಸಿಯೂಟದ ಯೋಜನೆ ಯಾವುದೇ ರೀತಿಯ ಲೋಪವಿಲ್ಲದೆ ಅನುಷ್ಠಾನ ಮಾಡಲು ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ
ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸಲು ಈ ಹಿಂದೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸೇವಾ ಭದ್ರತೆ, ವೇತನವನ್ನು ನಿಗ ‌ದಿತ ಅವಧಿಯಲ್ಲಿ ಪಾವತಿಸಲು ಮನವಿ ಸಹ ಸಲ್ಲಿಸಿದ್ದಾರೆ. ಆದರೆ, ಸರ್ಕಾರ ತನ್ನ ಯೋಜನೆಗಳನ್ನು ಪರಿಣಾಮಕಾರಿಯಾಗಿ
ಅನುಷ್ಠಾನಗೊಳಿಸಲು ಬಿಸಿಯೂಟ ನೌಕರರನ್ನು ಬಳಸಿಕೊಂಡಿದೆಯೇ ವಿನಃ, ಅವರಿಗೆ ಸಕಾಲದಲ್ಲಿ ವೇತನ ‌ ಪಾವತಿಸಲು ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಅಸಮಾಧಾನ ಕೇಳಿ ಬಂದಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2735 ಬಿಸಿಯೂಟ ನೌಕರರು ಇದ್ದಾರೆ. ಮಾರ್ಚ್‌ವರೆಗೆ ವೇತನ ಪಾವತಿಯಾಗಿಲ್ಲ. ಸರ್ಕಾರದಿಂದ ಮಂಜೂರಾದ ತಕ್ಷಣ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ.
-ಶೈಲಾ, ಶಿಕ್ಷಣಾಧಿಕಾರಿ, ಅಕ್ಷರ ದಾಸೋಹ
ಬಿಸಿಯೂಟ ಯೋಜನೆ

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲ. ಕುಟುಂಬ ನಿರ್ವಹಣೆಕಷ್ಟ ವಾಗಿದೆ.ಕಳೆದ ಸಾಲಿನಲ್ಲಿ ಶಾಲೆಗಳು ಸ್ಥಗಿತಗೊಂಡರೂ ಮಾರ್ಚ್‌ವರೆಗೆ ವೇತನ ಪಾವತಿಸಲಾಗಿದೆ. ನಂತರ ವೇತನ ಪಾವತಿಯಾಗಿಲ್ಲ, ಸರ್ಕಾರ ಕೂಡಲೇ ವೇತನ ಪಾವತಿಸಲು ಕ್ರಮಕೈಗೊಳ್ಳಬೇಕು.
-ಕೆ.ಎಸ್‌.ಮಂಜುಳಾ, ಕಾರ್ಯದರ್ಶಿ,
ಬಿಸಿಯೂಟ ನೌಕರರ ಸಂಘ

-ಎಂ.ಎ.ತಮೀಮ್‌ ಪಾಷ

Advertisement

Udayavani is now on Telegram. Click here to join our channel and stay updated with the latest news.

Next