Advertisement

ಕೆಎಸ್‌ಆರ್‌ಟಿಸಿ ನೌಕರರ ಸಂಘದಿಂದ ಪ್ರತಿಭಟನೆ

05:11 PM Nov 22, 2019 | Team Udayavani |

ತುಮಕೂರು: ತೆಲಂಗಾಣದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ರಾಜ್ಯ ಕೆಎಸ್‌ಆರ್‌ಟಿಸಿ ನೌಕರರ ಸಂಘದ ಪದಾಧಿಕಾರಿಗಳು ಸಿಐಟಿಯು ನೇತೃತ್ವದಲ್ಲಿ ನಗರದ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

Advertisement

ತೆಲಂಗಾಣ ಸಾರಿಗೆ ನೌಕರರು ಕಳೆದ 45 ದಿನದಿಂದ ಮುಷ್ಕರ ನಡೆಸುತ್ತಿದ್ದಾರೆ. 2017ರ ಏಪ್ರಿಲ್‌ನಲ್ಲಿ ಆಗಿರುವ ವೇತನ ಒಪ್ಪಂದ ಜಾರಿ ಆಗಬೇಕು. ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸುತ್ತಿದ್ದರೂ ತೆಲಂಗಾಣ ಸರ್ಕಾರ ಟೆಂಡರ್‌ ಕರೆದು ಶೇ.30 ಹುದ್ದೆಖಾಸಗೀಕರಣಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌. ಮಂಜುನಾಥ್‌ ಆಗ್ರಹಿಸಿದರು.

ಈಗಾಗಲೇ ಶೇ.20ರಷ್ಟು ನೌಕರರನ್ನು ಗುತ್ತಿಗೆ ಆಧಾರದಲ್ಲಿ ದುಡಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಖಾಸಗೀಕರಣಕ್ಕೆ ಒತ್ತು ನೀಡಿದರೆ ಅರ್ಧದಷ್ಟು ನೌಕರರು ಸಾಮಾಜಿಕ ಭದ್ರತೆ ಇಲ್ಲದೆ ಕೆಲಸ ಮಾಡಬೇಕಾದ ಪರಿಸ್ಥಿತಿ ಉದ್ಭವಿಸುತ್ತದೆ.ಹೀಗಾಗಿ ಖಾಸಗೀಕರಣ ಮಾಡ ಬಾರದು. ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಕರೆಸಿ ಮಾತುಕತೆ ಮಾಡ ಬೇಕು. ಆದರೆ ತೆಲಂಗಾಣ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಅದರಂತೆ ಬೇಡಿಕೆ ಈಡೇರಿಕೆಗಾಗಿ ಅಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿರುವುದು ನ್ಯಾಯೋ ಚಿತವಾಗಿದೆ. ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಕೆಎಸ್‌ಆರ್‌ಟಿಸಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವರಾಜ್‌, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸಿಪಿಎಂ ನಗರ ಕಾರ್ಯದರ್ಶಿ ಎಸ್‌.ರಾಘವೇಂದ್ರ, ಸಿಐಟಿಯು ಕಾರ್ಯದರ್ಶಿ ಎನ್‌. ಕೆ.ಸುಬ್ರಹ್ಮಣ್ಯ, ಕಮ್ಮಾರ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next