Advertisement

ಸಂತ್ರಸ್ತರಿಗೆ ನೌಕರರ ಒಂದು ದಿನದ ವೇತನ 

06:15 AM Sep 18, 2018 | Team Udayavani |

ಬೆಂಗಳೂರು: ಕೊಡಗು ಸೇರಿ ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನ ಬಿಟ್ಟುಕೊಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

Advertisement

ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡುವುದಾಗಿ ಘೋಷಿಸಿದ್ದ ನೌಕರರ ಸಂಘಟನೆಗಳು, ಇದನ್ನು ಸರ್ಕಾರಿ ನೌಕರರ ವೇತನದಿಂದ ಕಡಿತ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ ವೇತನದಲ್ಲಿ ಒಂದು ದಿನದ ವೇತನ ಕಡಿತಗೊಳಿಸಿ ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ 2018ಕ್ಕೆ ನೀಡಲು ಆದೇಶದಲ್ಲಿ ತಿಳಿಸಲಾಗಿದೆ. ವೇತನ ಕಡಿತಗೊಳಿಸುವ ಅಧಿಕಾರವನ್ನು ವೇತನ ಬಟವಾಡೆ ಅಧಿಕಾರಿಗಳು ಮತ್ತು ಖಜಾನೆ ಅಧಿಕಾರಿಗಳಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಲು ಇಚ್ಛಿಸದ ನೌಕರರು ಸೆ. 22ರೊಳಗೆ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಲಿಖೀತ ಅಭಿಮತ ಸಲ್ಲಿಸಬೇಕು.

ಇಲ್ಲವಾದಲ್ಲಿ ವೇತನ ನೀಡಲು ನೌಕರರ ಆಕ್ಷೇಪವಿಲ್ಲ ಎಂದು ಭಾವಿಸಿ ಸೆಪ್ಟೆಂಬರ್‌ ವೇತನದಲ್ಲಿ ಆ ಮೊತ್ತ ಕಡಿತಗೊಳಿಸಲಾಗುವುದು. ಇದಕ್ಕೆ ಆದಾಯ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಇರುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next