Advertisement

ಶಾಸಕ ರಾಜಶೇಖರ ಮನೆ ಎದುರು ನೌಕರರ ಪ್ರತಿಭಟನೆ

06:32 PM Apr 17, 2021 | Team Udayavani |

ಹುಮನಾಬಾದ: ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ 10ನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶಾಸಕ ರಾಜಶೇಖರ ಪಾಟೀಲ ಮನೆ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Advertisement

ಈ ವೇಳೆ ಮಾತನಾಡಿದ ನೌಕರರ ಸಂಘದ ಪದಾಧಿಕಾರಿಗಳು, ರಾಜ್ಯ ಸರ್ಕಾರ ಹೋರಾಟ ಹತ್ತಿಕ್ಕಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಹೋರಾಟಗಾರರನ್ನು ಬೆದರಿಸುತ್ತಿದೆ. ನಮ್ಮ ಘಟಕದ ಕೆಲವರನ್ನು ದೂರದ ಊರುಗಳಿಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಯುತ್ತದೆ. ಕೆಲ ಸಿಬ್ಬಂದಿಗಳು ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಮಣಿದು ಕೆಲಸಕ್ಕೆ ಹೊಗುತ್ತಿದ್ದಾರೆ.

ಅವರುಗಳೂ ಚಿಂತನೆ ಮಾಡಬೇಕಿದೆ. ಯಾರಿಗಾಗಿ ಮುಷ್ಕರ ನಡೆದಿದೆ. ಯಾರ ಭವಿಷ್ಯಕ್ಕಾಗಿ ಅನೇಕರು ಸರ್ಕಾರದ ಶಿಕ್ಷೆಗೆ ಗುರಿಯಾಗುತ್ತಿದ್ದಾರೆ? ಎಂಬುವುದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ನಂತರ ರಸ್ತೆಗೆ ಬಂದ ಮುಷ್ಕರ ನಿರತ ಸಿಬ್ಬಂದಿ ಸಂಚರಿಸುತ್ತಿದ ಬಸ್‌ ತಡೆದು ಚಾಲಕ ಹಾಗೂ ನಿರ್ವಾಹಕರಿಗೆ ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿಗಳ ಭವಿಷ್ಯಕ್ಕಾಗಿ ಹೋರಾಟ ನಡೆಯುವ ಸಂದರ್ಭದಲ್ಲಿ ಹೇಡಿಗಳಂತೆ ಕೆಲಸಕ್ಕೆ ಹಾಜರಾಗಿದ್ದೀರಿ. ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ. ಆ ಎಲ್ಲ ಸೌಲಭ್ಯಗಳು ನಿಮಗೆ ಬೇಡವೆ?, ಸಾರಿಗೆ ನೌಕರರ ಸಂಘ ಬೇಡವೆ? ಎಂದು ಪ್ರಶ್ನಿಸಿ ಮನಃ ಪರಿವರ್ತನೆಗೆ ಪ್ರಯತ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next