Advertisement

ಸರಕು ಸಾಗಣೆ ವಲಯದಲ್ಲಿ ಉದ್ಯೋಗಾವಕಾಶ; 3 ವಿವಿಗಳೊಂದಿಗೆ ಒಪ್ಪಂದಕ್ಕೆ ಸಹಿ

03:09 PM Jul 01, 2022 | Team Udayavani |

ಬೆಂಗಳೂರು: ಸರಕು ಸಾಗಾಣಿಕೆ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ಮಾನವ ಸಂಪನ್ಮೂಲ ಒದಗಿಸುವ ಉದ್ದೇಶದಿಂದ ಕರ್ನಾಟಕದ ಮೂರು ವಿವಿಗಳಾದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಮಂಡ್ಯ ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ ಹಾಗೂ ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

Advertisement

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಕೌಶಲ್ಯಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ಸರಕು ಸಾಗಾಣಿಕೆ ವಲಯಕ್ಕೆ ಸಂಬಂಧಿಸಿದಂತೆ ಇಂಡಸ್ಟ್ರಿ ಕನೆಕ್ಟ್ ಕಾನಕ್ಲೇವ್ ನಲ್ಲಿ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಪರಸ್ಪರ ಸಹಿ ಹಾಕಲಾಯಿತು. ಈ ಮೂಲಕ ಸರಕು ಸಾಗಣೆ ವಲಯದಲ್ಲಿ ಉದ್ಯೋಗ ಕಲ್ಪಿಸಲು  ಶೈಕ್ಷಣಿಕ ಮತ್ತು ಉದ್ಯೋಗದಾತರನ್ನು ಒಂದು ಕಡೆ ಸೇರಿಸಲು ಸಾಧ್ಯವಾಗಿದೆ.

ಈ ಮೂರು ವಿಶ್ವವಿದ್ಯಾಲಯಗಳಲ್ಲಿ ಸ್ಟೈಪೆಂಡರಿ ಅಪ್ರೆಂಟಿಸ್ಶಿಪ್ ಎಂಬೆಡೆಡ್ ಪದವಿ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತದೆ.  ಮೂರನೇ ವರ್ಷದಲ್ಲಿ ಸಂಬಂಧಿತ ಕಂಪನಿಗಳಲ್ಲಿ 12 ತಿಂಗಳ ಸ್ಟೈಪೆಂಡರಿ ಅಪ್ರೆಂಟಿಸ್ಶಿಪ್ನೊಂದಿಗೆ ಸಮಗ್ರ ಭಾಗವಾಗುವಂತೆ ಮಾಡಲಾಗುತ್ತದೆ. 12 ತಿಂಗಳುಗಳ ಶಿಷ್ಯವೃತ್ತಿಯು ವಿದ್ಯಾರ್ಥಿಗಳನ್ನು  ಕೌಶಲ್ಯಪೂರ್ಣರನ್ನಾಗಿ ಮಾಡುತ್ತದೆ. ಅವರನ್ನು ಉದ್ಯಮ-ಸಿದ್ಧರನ್ನಾಗಿ ಮಾಡುತ್ತದೆ. ಶಿಷ್ಯವೇತನದ ಅವಧಿಯಲ್ಲಿ ವಿದ್ಯಾರ್ಥಿಗಳು ಮಾಸಿಕ 7,500 ರೂ. ಸ್ಟೈಫಂಡ್ ಗಳಿಸುತ್ತಾರೆ.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಇ-ಕಾಮರ್ಸ್ ಬಿಬಿಎ, ಮಂಡ್ಯ ವಿಶ್ವವಿದ್ಯಾಲಯದಲ್ಲಿ ಲಾಜಿಸ್ಟಿಕ್ಸ್ ವಿಷಯದಲ್ಲಿ ಬಿ.ಕಾಂ. ಹಾಗೂ ನೃಪತುಂಗ ವಿಶ್ವವಿದ್ಯಾಲಯದಲ್ಲಿ ವಾಯುಯಾನದಲ್ಲಿ ಬಿಬಿಎ ಮತ್ತ ಏರ್ ಕಾರ್ಗೋ ಕೋರ್ಸ್ ಪ್ರಾರಂಭಿಸಲಾಗುವುದು.

ಸಮಾವೇಶ ಉದ್ಘಾಟಿಸಿದ ಕೌಶಲ್ಯಾಭಿವೃದ್ಧಿ ಸಚಿವ ಅಶ್ವತ್ಥನಾರಾಯಣ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ, ಭವಿಷ್ಯದ ಭಾರತಕ್ಕಾಗಿ ಯುವಕರನ್ನು ಸಜ್ಜುಗೊಳಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.

Advertisement

ಎನ್ ಇಪಿಯು ಶಿಕ್ಷಣಶಾಸ್ತ್ರಗಳಲ್ಲಿ ಒಂದಾಗಿದೆ.  ಉದ್ಯೋಗಸ್ಥಳ ಸಂಸ್ಕೃತಿಗೆ ವಿದ್ಯಾರ್ಥಿಗಳನ್ನು ಸಂವೇದನಾಶೀಲಗೊಳಿಸುವ, ಉದ್ಯಮಗಳಿಂದ ವಿದ್ಯಾರ್ಥಿಗಳಿಗೆ ರಚಿಸಲಾದ ಇಂಟರ್ನ್ಶಿಪ್ ಮತ್ತು ಅಪ್ರೆಂಟಿಸ್ಶಿಪ್ ಅವಕಾಶಗಳನ್ನು ಒದಗಿಸಲಾಗುತ್ತದೆ. ಉದ್ಯೋಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.  ಈ ಉಪಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕಾಡೆಮಿ ಮತ್ತು ಉದ್ಯಮಗಳು ಒಗ್ಗೂಡಬೇಕಾಗಿದೆ ಎಂದರು.

ಪಠ್ಯಕ್ರಮದ ಭಾಗವಾಗಿ ಇಂಟರ್ನ್ಶಿಪ್ ಮತ್ತು ಎಂಬೆಡಿಂಗ್ ಅಪ್ರೆಂಟಿಸ್ಶಿಪ್ ಕೆಲವು ದಿಟ್ಟ ಉಪಕ್ರಮಗಳಾಗಿವೆ. ಈ ಯೋಜನೆಯಿಂದ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೂ ಸಹಾ ಉತ್ತೇಜನ ನೀಡಲಿದೆ, ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು,  ಈ ಕಾರ್ಯಕ್ರಮದಿಂದ ಉದ್ಯೋಗವನ್ನರಸಿ ತಮ್ಮ ಪ್ರದೇಶಗಳಿಂದ ನಿರುದ್ಯೋಗಿಗಳ ವಲಸೆಯನ್ನು ತಡೆಗಟ್ಟಬಹುದಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಈ ಉಪಕ್ರಮವು ಯುವಕರನ್ನು ಅವರ ಕುಟುಂಬಗಳನ್ನು ತೊರೆದು ಹೊರ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸುವುದರಿಂದ ಅವರ ಕುಟುಂಬದಲ್ಲಿ ನೆಮ್ಮದಿ ಮಾಡುತ್ತದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವಕುಮಾರ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ  ಅಶ್ವಿನ್ ಡಿ ಗೌಡ, ಭಾರತೀಯ ಲಾಜಿಸ್ಟಿಕ್ ಸ್ಕಿಲ್ ಕೌನ್ಸಿಲ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿಕಾಂತ್,  ಫ್ಲಿಪ್ ಕಾರ್ಟ್ ನ ಮುಖ್ಯ ಆಪರೇಟಿಂಗ್ ಅಧಿಕಾರಿ ಕೃಷ್ಣ ರಾಘವನ್ ಮುಂತಾದವರು ಉಪಸ್ಥಿತರಿದ್ದರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next