Advertisement

ಪಕ್ಷಗಳ ಮಾನ್ಯತೆ ರದ್ದು ಅಧಿಕಾರ ಕೊಡಿ: ಇ.ಸಿ.

08:15 AM Feb 11, 2018 | Team Udayavani |

ಹೊಸದಿಲ್ಲಿ: ಶಿಕ್ಷೆಗೆ ಒಳಗಾಗಿರುವ ಜನಪ್ರತಿನಿಧಿಗಳು ರಾಜಕೀಯ ಪಕ್ಷ ರಚನೆ ಮಾಡಬಾರದು ಎಂಬ ವಾದಕ್ಕೆ ಬೆಂಬಲ ನೀಡಿರುವ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಕ್ಕೆ ನೀಡಿರುವ ಮಾನ್ಯತೆ ರದ್ದು ಮಾಡುವ ಅಧಿಕಾರ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ. ಈ ಬಗ್ಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ  ವಿಚಾರಣೆ ನಡೆಯಲಿದೆ. 

Advertisement

ಸದ್ಯ ಕೇಂದ್ರ ಚುನಾವಣಾ ಆಯೋಗಕ್ಕೆ ಪಕ್ಷವನ್ನು ನೋಂದಣಿ ಮಾಡುವ ಅಧಿಕಾರ ಮಾತ್ರ ಇದೆ. ಜನಪ್ರಾತಿನಿಧ್ಯ ಕಾಯ್ದೆಯ ಅನ್ವಯ ಈ ನಿಯಮ ಇದೆ. ಪಕ್ಷಗಳಲ್ಲಿ ಆಂತರಿಕವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಅದಕ್ಕಾಗಿ ಕೆಲವೊಂದು ನಿಯಮ ಜಾರಿಗೊಳಿಸಬೇಕಾಗಿದೆ. ಹೀಗಾಗಿ ಇಂಥ ಕ್ರಮ ಅನಿವಾರ್ಯ ಎಂದಿದೆ. ರಾಜಕೀಯ ಪಕ್ಷಗಳ ನೋಂದಣಿ ರದ್ದು ಮಾಡುವ ಬಗ್ಗೆ ಅನುಮತಿ ನೀಡುವಂತೆ 20 ವರ್ಷಗಳಿಂದ ಕೇಂದ್ರಕ್ಕೆ ಮನವಿ ಮಾಡಲಾಗುತ್ತಿದ್ದು, ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಅರ್ಜಿಯಲ್ಲಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next