Advertisement

ಹುಡುಕಿ ಹುಡುಕಿ ಉಗ್ರರ ಹೊಡೆಯುತ್ತಿರುವ ರಕ್ಷಣಾ ಪಡೆ

11:46 AM Apr 08, 2019 | Team Udayavani |

ಶ್ರೀನಗರ: ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಮೇರೆಗೆ ರಕ್ಷಣಾ ಪಡೆ ರವಿವಾರ ಬೆಳ್ಳಂಬೆಳಗ್ಗೆ ಕಾಶ್ಮೀರದಲ್ಲಿ ಎನ್ ಕೌಂಟರ್ ಆರಂಭಿಸಿದ್ದು, ಉಗ್ರರನ್ನು ಸದೆಬಡಿಯುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.

Advertisement

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮಿದುರಾ ಟ್ರೈಲ್ ಎಂಬಲ್ಲಿನ ಅರಣ್ಯ ಪ್ರದೇಶದಲ್ಲಿ ಎರಡರಿಂದ ಮೂರು ಉಗ್ರರು ಅವಿತಿರುವ ಖಚಿತ ಮಾಹಿತಿ ಪಡೆದ ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣಾ ಪಡೆ, ರಾಜ್ಯ ಪೊಲೀಸ್ ಮತ್ತು ಸಿಆರ್ ಪಿಎಫ್ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಸ್ಥಳವನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ್ದಾರೆ.

ರಕ್ಷಣಾ ಪಡೆ ಉಗ್ರರು ಅವಿತಿದ್ದ ಸ್ಥಳವನ್ನು ಸುತ್ತುವರಿಯುತ್ತಿದ್ದಂತೆ ಅಡಗಿದ್ದ ಉಗ್ರರು ಯೋಧರ ಮೇಲೆ ಗುಂಡಿನ ಪ್ರಹಾರ ನಡೆಸಲು ಆರಂಭಿಸಿವೆ. ಇದಕ್ಕೆ ಪ್ರತೀಕಾರವಾಗಿ ರಕ್ಷಣಾ ಪಡೆಗಳು ಪ್ರತಿ ಗುಂಡಿನ ದಾಳಿ ನಡೆಸಿವೆ.

ಕಾರ್ಯಾಚರಣೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next