Advertisement

ಪಂಜಾಬ್‌ನಲ್ಲಿ ಭೀಕರ ಎನ್‌ಕೌಂಟರ್: ಸಿಧು ಮೂಸೆವಾಲಾ ಕೊಲೆ ಆರೋಪಿಗಳ ಹತ್ಯೆ

09:51 PM Jul 20, 2022 | Vishnudas Patil |

ಅಮೃತಸರ:ಪಂಜಾಬ್‌ನ ಅಮೃತಸರ ಬಳಿ ಬುಧವಾರ ಭೀಕರ ಎನ್‌ಕೌಂಟರ್ ನಡೆದಿದ್ದು, ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಪಾತ್ರ ವಹಿಸಿದ್ದಾರೆ ಎಂದು ಶಂಕಿಸಲಾದ ಇಬ್ಬರು ಗ್ಯಾಂಗ್ ಸ್ಟರ್ ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಕಾಳಗದಲ್ಲಿ ಇಬ್ಬರನ್ನು ಹತ್ಯೆಗೈಯಲಾಗಿದೆ.

Advertisement

ಅಧಿಕೃತ ಮೂಲಗಳ ಪ್ರಕಾರ, ಎನ್‌ಕೌಂಟರ್‌ನಲ್ಲಿ ಇಬ್ಬರುಗ್ಯಾಂಗ್ ಸ್ಟರ್ ಗಳಾದ ​​ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸಾ ಅವರು ಗಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದು, ಇಂದು ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಪಂಜಾಬ್ ಪೊಲೀಸರೂ ಗಾಯಗೊಂಡಿದ್ದಾರೆ.

ಭಕ್ನಾ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸಾವುನೋವುಗಳು ಸಂಭವಿಸಿವೆ ಎಂದು ವರದಿಗಳು ತಿಳಿಸಿವೆ. ಅಮೃತಸರದಿಂದ 20 ಕಿಮೀ ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್ ಮಧ್ಯಾಹ್ನದ ವೇಳೆಗೆ ಪ್ರಾರಂಭವಾಗಿದ್ದು, ಪಂಜಾಬ್ ಪೊಲೀಸರ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್ ಇಬ್ಬರು ವ್ಯಕ್ತಿಗಳನ್ನು ಬೆನ್ನಟ್ಟಿ, ಕಾರ್ಯಾಚರಣೆ ನಡೆಸಿದ್ದು, ಇಡೀ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next