Advertisement

ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಗಂಭೀರ ಗಾಯಗೊಂಡ ರಾಷ್ಟ್ರೀಯ ರೈಫಲ್ಸ್ ನ ಯೋಧ

12:41 PM Sep 04, 2020 | keerthan |

ಶ್ರೀನಗರ: ಜಮ್ಮು ಕಾಶ್ಮೀರ ಬಾರಮುಲ್ಲಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಉಗ್ರರ ವಿರುದ್ಧದ ಎನ್ ಕೌಂಟರ್ ನಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ.

Advertisement

ಬಾರಾಮುಲ್ಲಾ ಜಿಲ್ಲೆಯ ಪಟ್ಟಾನ್ ಪ್ರದೇಶದ ಯೆಡಿಪೋರಾದಲ್ಲಿ ಈ ಎನ್ ಕೌಂಟರ್ ನಡೆದಿದೆ. ರಾಷ್ಟ್ರೀಯ ರೈಫಲ್ಸ್, ಸಿಆರ್ ಪಿಎಫ್ ಯೋಧರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿ ವೇಳೆ ರಾಷ್ಟ್ರೀಯ ರೈಫಲ್ಸ್ ನ ಮೇಜರ್ ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಆತ್ಮನಿರ್ಭರ ಭಾರತವೇ ದೇಶವಾಸಿಗಳ ಮಂತ್ರ; ನಾಯಕತ್ವ ಶೃಂಗದಲ್ಲಿ ಪ್ರಧಾನಿ ಮೋದಿ ನುಡಿ

ಕಾಶ್ಮೀರ್ ಜೋನ್ ಪೊಲೀಸರು ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾರಾಮುಲ್ಲಾದ ಯೆಡಿಪೋರಾದಲ್ಲಿ ಎನ್ ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ತಮ್ಮ ಕೆಲಸ ಆರಂಭಿಸಿದ್ದಾರೆ. ಇನ್ನಷ್ಟು ಮಾಹಿತಿಗಳನ್ನು ನೀಡಲಿದ್ದೇವೆ ಎಂದು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ‘ನಶೆ’ ನಂಟು: ರಿಯಾ ಚಕ್ರವರ್ತಿ, ಶೋವಿಕ್ ನಿವಾಸಕ್ಕೆ NCB ರೈಡ್

Advertisement
Advertisement

Udayavani is now on Telegram. Click here to join our channel and stay updated with the latest news.

Next