Advertisement

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು

01:27 PM Jun 25, 2020 | keerthan |

ಶ್ರೀನಗರ: ಭಾರತೀಯ ಭದ್ರತಾ ಪಡೆಗಳು ಇಂದು ಮುಂಜಾನೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉತ್ತರ ಕಾಶ್ಮೀರದ ಹರ್ಶಿ ಗ್ರಾಮದಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ.

Advertisement

ಭಾರತೀಯ ಸೇನೆ, ಜಮ್ಮು ಕಾಶ್ಮೀರ ಪೊಲೀಸರು`ಮತ್ತು ಸಿಆರ್ಪಿಎಫ್ ಜವಾನರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ನೆಲಕ್ಕುರುಳಿಸಲಾಗಿದೆ.

ಸಾಪೋರ್ ಜಿಲ್ಲೆಯ ಹರ್ಶಿವ ದಲ್ಲಿ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಭದ್ರತಾ ಪಡೆಗಳು ಇಬ್ಬರನ್ನು ಹತ್ಯೆ ಮಾಡಿದೆ. ಇನ್ನೂ ಎನ್ ಕೌಂಟರ್ ನಡೆಯುತ್ತಿದೆ ಎಂದು ವರದಿಯಾಗಿದೆ.

ಮಂಗಳವಾರ ಪುಲ್ವಾಮಾ ಜಿಲ್ಲೆಯ ಬುಂಡ್ಜೋ ಪ್ರದೇಶದಲ್ಲಿ ನಡೆದಿದ್ದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next