Advertisement

ಜಮ್ಮು ಕಾಶ್ಮೀರ: ಬಾರಾಮುಲ್ಲಾದಲ್ಲಿ ಸಾಗಿರುವ ಎನ್‌ಕೌಂಟರ್‌

03:15 PM Oct 25, 2018 | udayavani editorial |

ಶ್ರೀನಗರ : ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಗುರುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್‌ ನಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಗುಪ್ತಚರ ಮಾಹಿತಿ ದೊರಕಿದುದನ್ನು ಅನುಸರಿಸಿ ಭದ್ರತಾ ಪಡೆಗಳು ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಉಗ್ರರು ಗುಂಡಿನ ಕಾಳಗವನ್ನು ಆರಂಭಿಸಿದರು; ಭದ್ರತಾ ಪಡೆಗಳು ಅದಕ್ಕೆ ತಕ್ಕುದಾದ ಉತ್ತರ ನೀಡಿದರು; ಎನ್‌ಕೌಂಟರ್‌ ಈಗಲೂ ಸಾಗಿದೆ ಎಂದು ಪೊಲೀಸರು ತಿಳಿಸಿದರು. 

ಈ ವರೆಗಿನ ವರದಿಗಳ ಪ್ರಕಾರ ಯಾವುದೇ ಸಾವು, ನೋವು ಸಂಭವಿಸಿಲ್ಲ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next