Advertisement
ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಕುಂದಾಪುರ ಮೂಡುಬಗೆ ಅಂಪಾರು ವಾಗೊjàತಿ ಶ್ರವಣದೋಷ ವುಳ್ಳ ಮಕ್ಕಳ ವಸತಿ ಶಾಲೆಯ ಸಹ ಯೋಗದಲ್ಲಿ ಶನಿವಾರ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರ್ ಜಿಲ್ಲಾ ಮಟ್ಟದ (ಉಡುಪಿ, ದ.ಕ., ಭಟ್ಕಳ) ವಿಶೇಷ ಮಕ್ಕಳ ಸಾಂಸ್ಕೃತಿಕ ಹಬ್ಬ “ಹೊಂಗಿರಣ 2019′ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಮಾತನಾಡಿ, ವಿಶೇಷ ಮಕ್ಕಳಿಗೆ ಎಲ್ಲರಂತೆ ಬದುಕುವ ಹಕ್ಕಿದೆ. ಈ ನಿಟ್ಟಿನಲ್ಲಿ ಅವರಿಗಾಗಿ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ. ಅವರನ್ನು ಸಮಾ ಜದ ಮುಖ್ಯ ವಾಹಿನಿಗೆ ತರುವಲ್ಲಿ ಎಲ್ಲರ ಪ್ರಯತ್ನ ಇರಬೇಕು ಎಂದರು. ಸರಕಾರಕ್ಕೆ ಮನವಿ
ವಿಶೇಷ ಮಕ್ಕಳನ್ನು ನೋಡಿಕೊಳ್ಳು ವುದು ದೊಡ್ಡ ಸೇವೆ. ಆ ಸೇವೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರಿಗೆ ಸರಕಾರದಿಂದ ಹಲವು ತಿಂಗಳಿ ನಿಂದ ವೇತನ ಪಾವತಿಯಾಗು ತ್ತಿಲ್ಲ. ಬಂದರೂ ಕಡಿಮೆ ವೇತನವಿದೆ. ಈ ಬಗ್ಗೆ ಸರಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸರಕಾರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಮನವಿ ಮಾಡಿದರು.
Related Articles
Advertisement
ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳಿಂದ ಸುಮಾರು 20 ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಬಹುಮಾನ ಮಂಗಳೂರು ಸಾನ್ನಿಧ್ಯ ವಿಶೇಷ ಮಕ್ಕಳ ಶಾಲೆ, ದ್ವಿತೀಯ ಬಹುಮಾನ ಪಾಂಬೂರು ಮಾನಸ ವಿಶೇಷ ಮಕ್ಕಳ ಶಾಲೆ, ತೃತೀಯ ಬಹುಮಾನ ಮಂಗಳೂರಿನ ಸೈಂಟ್ ಆ್ಯಗ್ನೆಸ್ ವಿಶೇಷ ಮಕ್ಕಳ ಶಾಲೆಗಳು ಪಡೆದುಕೊಂಡವು. ವಿಶೇಷ ಮಕ್ಕಳ ಸಾಂಸ್ಕೃತಿಕ ಹಬ್ಬ ತೀರ್ಪುಗಾರರಾಗಿ ಡಾ| ಮಂಜರಿ ಚಂದ್ರ, ಅಮೃತಾ, ಜಗದೀಶ್ ಭಾಗವಹಿಸಿದರು. ಅಂಪಾರು ವಾಗೊjàತಿ ಶಾಲೆ ಆತಿಥೇಯ ಸಂಸ್ಥೆಯಾದ ಕಾರಣ ಸ್ಪರ್ಧೆಯಲ್ಲಿ ಪಾಲ್ಗೊಂಡಿರಲಿಲ್ಲ.
ಸಾಮಾನ್ಯವಾಗಿ ಯಾವುದೇ ಕಾರ್ಯಕ್ರಮಕ್ಕೆ ಹೋಗುವಾಗ ನಾನು ಕೋಟ್ ಧರಿಸುವುದಿಲ್ಲ. ಆದರೆ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೆಂದರೆ ಹೀಗಿರುತ್ತಾರೆ ಎಂಬುದನ್ನು ಮಕ್ಕಳು ನೋಡಬೇಕು ಎಂಬ ಕಾರಣಕ್ಕಾಗಿ ಕೋಟ್ ಧರಿಸಿಕೊಂಡು ಬಂದಿದ್ದೇನೆ. ವಿಶೇಷ ಮಕ್ಕಳು ಕೂಡ ಜಿಲ್ಲಾಧಿಕಾರಿಯಂತಹ ಉನ್ನತ ಹುದ್ದೆಗೆ ಏರುವಂತಾಗಬೇಕು.– ಜಿ.ಜಗದೀಶ್