Advertisement

ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ

11:22 AM Aug 06, 2018 | Team Udayavani |

ಬೆಂಗಳೂರು: ಕಾಲೇಜುಗಳಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ಅಥವಾ ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಅಥವಾ ಪ್ರಮಾಣ ಪತ್ರ ದೊರೆಯಲಿದೆ.

Advertisement

ಇದು ಎನ್‌ಎಸ್‌ಎಸ್‌ ಕಾರ್ಯಕ್ರಮವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ರಕ್ತದಾನಕ್ಕಾಗಿ ಯುವ ಜನತೆಯನ್ನು ಪ್ರೋತ್ಸಾಹಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಆದ್ದರಿಂದ ರಾಜ್ಯದ ಪಾಲಿಟೆಕ್ನಿಕ್‌ ಸೇರಿದಂತೆ ಇಲಾಖೆ ವ್ಯಾಪ್ತಿಯ ಪ್ರತಿ ಕಾಲೇಜಿನಲ್ಲೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಸೂಕ್ತ ಪ್ರೋತ್ಸಾಹ ನೀಡಲು ಇಲಾಖೆ ಎಲ್ಲ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶಿಸಿದೆ.

ಗಣರಾಜ್ಯೋತ್ಸವ ಅಥವಾ ಸ್ವಾತಂತ್ರ್ಯದಿನಾಚರಣೆಯಂದು ಅಂತಹ ಯುವಕರಿಗೆ ಗಣ್ಯರಿಂದ ಪ್ರಶಸ್ತಿ ಪತ್ರ ಅಥವಾ ಪದಕ ವಿತರಿಸಬೇಕು. ಇದರಿಂದ ಯುವಕರಿಗೆ ಪ್ರೋತ್ಸಾಹ ದೊರೆಯಬೇಕು. ಇದರ ವರದಿ ರಾಜ್ಯ ಎನ್‌ಎಸ್‌ಎಸ್‌ ಕೋಶಕ್ಕೆ ಇ-ಮೇಲ್‌ ಮಾಡಬೇಕು ಎಂದು ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next