Advertisement

ಸ್ಥಳೀಯ ಕ್ರೀಡಾಪಟುಗಳಿಗೆ ಸಂಸ್ಥೆಯಿಂದ ಪ್ರೋತ್ಸಾಹ’

11:21 AM May 13, 2019 | Suhan S |

ಉಳ್ಳಾಲ, ಮೇ 12: ಭಾರತ್‌ ಪ್ರೌಢಶಾಲಾ ಕ್ರೀಡಾಂಗಣ ಹಲವಾರು ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ರೂಪಿಸಿದ ಹೆಗ್ಗಳಿಕೆಯಿದ್ದು, ಮುಂದಿನ ದಿನಗ‌ಳಲ್ಲಿ ಈ ಕ್ರೀಡಾಂಗಣದಲ್ಲಿ ಸಾಧನೆ ಮಾಡುವ ಸ್ಥಳೀಯ ಕ್ರೀಡಾಪಟುಗಳಿಗೆ ಸಂಸ್ಥೆ ಪ್ರೋತ್ಸಾಹ ನೀಡಲಿದೆ ಎಂದು ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್‌ ಕುಮಾರ್‌ ಉಳ್ಳಾಲ್ ಅಭಿಪ್ರಾಯಪಟ್ಟರು.

Advertisement

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಮಂಗಳೂರು ಹಾಗೂ ಯೂತ್‌ ಸ್ಫೋರ್ಟ್ಸ್ ಅಕಾಡೆಮಿ ಮತ್ತು ಉಳ್ಳಾಲ ಫುಟ್ಬಾಲ್ ಅಕಾಡೆಮಿ ಮಾಸ್ತಿಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಳ್ಳಾಲ ಭಾರತ್‌ ಪ್ರೌಢಶಾಲಾ ಮೈದಾನದಲ್ಲಿ ನಡೆದ 17ನೇ ವರ್ಷದ ಉಚಿತ ಫುಟ್ಬಾಲ್ ಬೇಸಗೆ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಯು.ಎಚ್. ಹಸೈನಾರ್‌, ಆ್ಯಶ್‌ ಫುಟ್ಬಾಲ್ ಕ್ಲಬ್‌ನ ಅಧ್ಯಕ್ಷ ಅಝೀಂ, ಸೋಕರ್‌ ಫುಟ್ಬಾಲ್ ಕ್ಲಬ್‌ನ ಸದಸ್ಯ ಹಾಗೂ ರಾಷ್ಟ್ರಮಟ್ಟದ ಫುಟ್ಬಾಲ್ ಆಟಗಾರ ಅಯಾಝ್, ಉದ್ಯಮಿ ಎಚ್.ಕೆ. ಖಾದರ್‌, ಉಳ್ಳಾಲ ಕ್ರಿಕೆಟ್ ಬೋರ್ಡ್‌ ಅಧ್ಯಕ್ಷ ಖಲೀಲ್ ಇಬ್ರಾಹಿಂ, ಭಾರತ್‌ ಶಿಕ್ಷಣ ಸಂಸ್ಥೆಯ ಸಂಚಾಲಕ ಯಶವಂತ ಅಮೀನ್‌ ಉಪಸ್ಥಿತರಿದ್ದರು.

ಉಳ್ಳಾಲ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕಿ ವಿನಯ ಕುಮಾರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರೀತಂ ಕುಮಾರ್‌ ಕಾರ್ಯಕ್ರಮ ನಿರ್ವಹಿಸಿದರು. ತರಬೇತುದಾರ ಹಾಗೂ ಉಳ್ಳಾಲ ಫುಟ್ಬಾಲ್ ಅಕಾಡೆಮಿ ಅಧ್ಯಕ್ಷ ಸಾಜಿದ್‌ ಉಳ್ಳಾಲ್ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next