Advertisement

Karnataka: 14.72 ಲಕ್ಷ ಎಕರೆ ಸರಕಾರಿ ಜಮೀನು ಒತ್ತುವರಿ- ಕೃಷ್ಣ ಭೈರೇಗೌಡ

11:42 PM Dec 13, 2023 | Team Udayavani |

ಬೆಳಗಾವಿ: ರಾಜ್ಯಾದ್ಯಂತ ಒಟ್ಟು 63.32 ಲಕ್ಷ ಎಕರೆ ಸರಕಾರಿ ಜಮೀನು ಇದ್ದು, ಇದರಲ್ಲಿ 14.72 ಲಕ್ಷ ಎಕರೆ ಜಮೀನು ಒತ್ತುವರಿಯಾಗಿದೆ. ವಿವಿಧ ನ್ಯಾಯಾಲಯಗಳಲ್ಲಿರುವ ಪ್ರಕರಣಗಳು, ಅಕ್ರಮ-ಸಕ್ರಮ ಯೋಜನೆ ಮತ್ತು ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ 10.82 ಎಕರೆ ಜಮೀನು ಹೊರತುಪಡಿಸಿ ಉಳಿದ 3.89 ಲಕ್ಷ ಎಕರೆ ಭೂಮಿಯನ್ನು ಒತ್ತುವರಿಯಿಂದ ತೆರವುಗೊಳಿಸಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

Advertisement

ವಿಧಾನಪರಿಷತ್‌ನಲ್ಲಿ ಡಾ| ವೈ.ಎ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒತ್ತುವರಿಯಾಗಿರುವ 3.89 ಲಕ್ಷ ಎಕರೆ ಭೂಮಿಯಲ್ಲಿ 2.73 ಲಕ್ಷ ಎಕರೆ ಜಮೀನನ್ನು ತೆರವುಗೊಳಿಸಲಾಗಿದೆ. ರಾಜ್ಯಾದ್ಯಂತ ಒತ್ತುವರಿ ತೆರವು ಕಾರ್ಯ ಪ್ರಗತಿಯಲ್ಲಿದೆ ಎಂದರು.

ಅತಿಕ್ರಮಣವನ್ನು ತೆರವು ಗೊಳಿಸಲು ಅಭಿಯಾನದ ರೀತಿಯಲ್ಲಿ ಆ್ಯಪ್‌ ಒಂದನ್ನು ಆರಂಭಿಸಲಾಗಿದ್ದು ಇದು ಜನವರಿಯಿಂದ ಕಾರ್ಯಾರಂಭ ಮಾಡಲಿದೆ. ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಹೋಗಿ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆ ಮಾಡಿ ತಹಶೀಲ್ದಾರರಿಗೆ ವರದಿ ಕೊಡಬೇಕು. ಅನಂತರ ಅದನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.

ಗೋಮಾಳ ಮಂಜೂರಾತಿ ಇಲ್ಲ
ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಜ್ಯದ ಯಾವುದೇ ಪ್ರದೇಶದಲ್ಲಿನ ಗೋಮಾಳ ಮತ್ತು ಖರಾಬು ಹಾಗೂ ಸರಕಾರದ ಜಮೀನುಗಳನ್ನು ಕರ್ನಾಟಕ ಭೂ ಮಂಜೂರಾತಿ ನಿಯಮದಂತೆ ಯಾವುದೇ ವ್ಯಕ್ತಿ ಅಥವಾ ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ವಿಧಾನಪರಿಷತ್‌ದಲ್ಲಿ ಸದಸ್ಯ ಕೆ. ಹರೀಶಕುಮಾರ್‌ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ನಗರ ಪೌರಮಿತಿಯೊಳಗಿನ ಸರಕಾರಿ ಜಮೀನುಗಳನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಬೇಕಾಗುತ್ತದೆ. ಮುಖ್ಯ ವಾಗಿ ರಾಜ್ಯದಲ್ಲಿ ಜಾಗದ ಕೊರತೆ ಬಹಳವಾಗಿದೆ. ಶ್ಮಶಾನ, ಶಾಲೆಗಳ ನಿರ್ಮಾಣಕ್ಕೆ ಜಾಗ ಸಿಗುತ್ತಿಲ್ಲ ಎಂದರು. ಈಗ ಅಲ್ಪಸ್ವಲ್ಪ ಜಮೀನುಗಳನ್ನು ಖಾಸಗಿಯವರಿಂದ ಖರೀದಿಸಿ ಶ್ಮಶಾನಕ್ಕೆ ಕೊಡಬೇಕಾದ ಸ್ಥಿತಿ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರದ ಜಮೀನುಗಳನ್ನು ಯಾವುದೇ ವ್ಯಕ್ತಿ ಅಥವಾ ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next