Advertisement

ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಮುಂದಾದ ಬಿಬಿಎಂಪಿ

11:03 AM Sep 14, 2022 | Team Udayavani |

ಬೆಂಗಳೂರು : ರಾಜಕಾಲುವೆ ಒತ್ತುವರಿದಾರರ ಹಿಟ್ ಲಿಸ್ಟ್ ನಲ್ಲಿ ಕಾಂಗ್ರೆಸ್ ಯುವನಾಯಕ ಮಾಲೀಕತ್ವದ ನಲಪಾಡ್ ಅಕಾಡೆಮಿಯೂ ಸೇರಿದ್ದು ನಿನ್ನೆ ರಾಜಕಾಲುವೆ ತೆರವು ಕಾರ್ಯಾಚರಣೆ ವೇಳೆ ಹೈಡ್ರಾಮವೇ ನಡೆದಿದೆ. ಆದಾಗಿಯೂ ಇಂದು ಬಿಬಿಎಂಪಿ ಅಧಿಕಾರಿಗಳು ಮತ್ತೆ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

Advertisement

ದೊಡ್ಡವರ ಮುಂದೆ ಜೆಸಿಬಿ ಘರ್ಜನೆ ಸೈಲೆಂಟ್ ಆಗಿದೆ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದೂ ಕೂಡ ನಲಪಾಡ್ ಅಕಾಡೆಮಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಪ್ರಹಸನ ಮುಂದುವರಿಯಲಿದೆ.

ಇದನ್ನೂ ಓದಿ:ಹುಬ್ಬಳ್ಳಿ : ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ : ಮಹಿಳೆ ಸೇರಿ ಮೂವರು ಸಾವು

ಚಲಘಟ್ಟದ ನಲಪಾಡ್ ಅಕಾಡೆಮಿ ಬಳಿ ಒತ್ತುವರಿ ತೆರವಿಗೆ‌ ವಿರೋಧ ವ್ಯಕ್ತವಾಗಿರುವುದರಿಂದ ಸ್ಥಳದಲ್ಲಿ ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಈ ವಿಚಾರ ವಿಧಾನಸಭೆಯಲ್ಲೂ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಒತ್ತುವರಿ ವಿಚಾರ ತೆಗೆದಾಗ ನಲಪಾಡ್ ಹಾಗೂ ಹ್ಯಾರೀಸ್ ನಡೆಸಿದ ರಾಜಾಕಾಲುವೆ ಒತ್ತುವರಿಯನ್ನು ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next