Advertisement

ಎಂಡೋಸಲ್ಫಾನ್‌ ಪೀಡಿತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

11:06 AM Jan 05, 2017 | Team Udayavani |

ಬೆಳ್ತಂಗಡಿ : ಇಲ್ಲಿನ ಕೊಕ್ಕಡದ ಗ್ರಾಮದ ಆಲಡ್ಕದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರಾಗಿದ್ದ ಒಂದೇ ಕುಟುಂಬದ ನಾಲ್ವರು  ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. 

Advertisement

ಬಾಬುಗೌಡ(62), ಸದಾನಂದ(32), ಗಂಗಮ್ಮ(55)  ಸೇರಿದಂತೆ ನಾಲ್ವರು  ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರ ಶವಗಳು ಕೆರೆಯಲ್ಲಿ ಪತ್ತೆಯಾಗಿದ್ದು , ಇನ್ನೋರ್ವ ಪುತ್ರ ನಿತ್ಯಾನಂದ (30) ನಾಪತ್ತೆಯಾಗಿದ್ದು ಆತನ ಶವಕ್ಕಾಗಿ ಹುಡುಕಾಟ ಮುಂದುವರಿದಿದೆ. 

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಎಂಡೊಸಲ್ಫಾನ್‌ ಮಾರಕ ಪೀಡೆಗೆ ತುತ್ತಾಗಿ ತೀವ್ರವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next