Advertisement

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

11:57 AM Aug 29, 2024 | Team Udayavani |

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ನೌಕರ ನನ್ನು ಚಾಕುವಿನಿಂದ ಇರಿದು ಕೊಲೆಗೈ ದಿರುವ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಸಿಬ್ಬಂದಿ ರಾಮಕೃಷ್ಣ (45) ಮೃತ ವ್ಯಕ್ತಿ. ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ಯಲ್ಲಿ ಹತ್ಯೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿ ರಮೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಏನಿದು ಘಟನೆ?: ವಿವಾಹಿತ ರಾಮಕೃಷ್ಣ ವಿಮಾನ ನಿಲ್ದಾಣದಲ್ಲಿ ಟ್ರೈ ಎಳೆಯುವ ಕೆಲಸ ನಿರ್ವಹಿಸುತ್ತಿದ್ದ. ಮಧುಗಿರಿ ತಿಮ್ಮನಹಳ್ಳಿ ಮೂಲದ ಬಸ್‌ ನಿರ್ವಾಹಕ ರಮೇಶ್‌ ಮತ್ತು ಸುನೀತಾ ಮದುವೆಯಾಗಿ 20 ವರ್ಷಗಳಾಗಿದ್ದವು. ಈ ನಡುವೆ, 3 ವರ್ಷಗಳ ಹಿಂದೆ ಸುನೀತಾಗೆ ರಾಮಕೃಷ್ಣ ಫೋನ್‌ ಮೂಲಕ ಪರಿಚಯವಾಗಿದ್ದರು. ಪರಿಚಯದ ನಂತರ ಫೋನ್‌ ಮೂಲಕ ಸಂಪರ್ಕದಲ್ಲಿದ್ದರು. ಈ ವಿಚಾರ ಗಂಡ ರಮೇಶ್‌ ತಿಳಿದು ಇಬ್ಬರ ನಡುವೆ ಅನೈತಿಕ ಸಂಬಂಧವಿದೆ ಎಂದು ರಾಮಕೃಷ್ಣನ ಜತೆ ಗಲಾಟೆ ಮಾಡಿಕೊಂಡಿದ್ದ. ಬಳಿಕ ಸುನೀತಾ- ರಮೇಶ್‌ ನಡುವೆ ವೈಮನಸ್ಸು ಉಂಟಾಗಿ ಇಬ್ಬರೂ ಬೇರೆಯಾಗಿದ್ದರು. ಕಳೆದ 3 ವರ್ಷಗಳಿಂದ ರಮೇಶ್‌ ದ್ವೇಷ ಇಟ್ಟುಕೊಂಡಿದ್ದು, ಈ ದ್ವೇಷದಿಂದಾಗಿ ರಾಮಕೃಷ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next