Advertisement

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

07:41 AM Oct 02, 2023 | Kavyashree |

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

Advertisement

ಈ ಸಂದರ್ಭದಲ್ಲಿ ಜನರು ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಫ್ಲೆಕ್ಸ್, ಬಂಟಿಂಗ್ಸ್ ಬ್ಯಾನರ್ ಕಟ್ಟುವುದು, ಮಾರಕಾಸ್ತ್ರ, ಸ್ಫೋಟಕಗಳ ಬಳಕೆ ನಿರ್ಬಂಧಿಸಲಾಗಿದೆ.

ಭಾನುವಾರ ರಾತ್ರಿ ಶಾಂತಿ ನಗರ ರಾಗಿಗುಡ್ಡ ವಾರ್ಡ್ ಗೆ ಸೀಮಿತವಾಗಿ ಸೆಕ್ಷನ್ 144 ಹಾಕಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಇಡೀ ಶಿವಮೊಗ್ಗ ನಗರಕ್ಕೆ ವಿಸ್ತರಿಸಲಾಗಿದೆ. ಮುಂದಿನ ಆದೇಶದವರೆಗೂ ಇದು ಚಾಲ್ತಿಯಲ್ಲಿ ಇರುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next