Advertisement

ಇಂಗಳಿಗಿ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡಿದರೆ ಬೆಳ್ಳಿ ರಥದಲ್ಲಿ ಮೆರವಣಿಗೆ

01:29 PM Jun 23, 2019 | Naveen |

ಹೊಸಪೇಟೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ತಾಲೂಕಿನ ಇಂಗಳಿಗಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದರೆ ಬೆಳ್ಳಿ ರಥದಲ್ಲಿ ಮೆರವಣಿಗೆ ನಡೆಸಿ ಸ್ವಾಗತಿಸಲಾಗುವುದು ಎಂದು ಇಂಗಳಿಗಿ ಗ್ರಾಪಂ ಸದಸ್ಯ ಎ.ಕೆ.ಉದೇದಪ್ಪ ಸಾಮಾಜಿಕ ಜಾಲತಾಣದಲ್ಲಿ (ಫೇಸ್‌ಬುಕ್‌) ಪೋಸ್ಟ್‌ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

Advertisement

ತಾಲೂಕಿನ ಇಂಗಳಿಗೆ ಸ.ಹಿ.ಪ್ರಾ.ಶಾಲೆಯಲ್ಲಿ ವಾಸ್ತವ್ಯ ಹೂಡಲು ದಿನಾಂಕ ನಿಗದಿ ಮಾಡಬೇಕು. ಸಿಎಂ ಗ್ರಾಮ ವಾಸ್ತವ್ಯ ಮಾಡಿದರೆ ನೀರಾವರಿ ಸೇರಿದಂತೆ ಇತರೆ ಮೂಲ ಸೌಕರ್ಯಕ್ಕಾಗಿ ಸಾವಿರಾರು ಕೋಟಿ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಆಗ್ರಹಿಸಲಾಗುವುದು.

ಒಂದು ವೇಳೆ ಗ್ರಾಮ ವಾಸ್ತವ್ಯ ದಿನಾಂಕ ನಿಗದಿ ಮಾಡಿದರೆ ಬೆಳ್ಳಿ ರಥದಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಲೈಕ್‌ ಹಾಗೂ ಕಾಮೆಂಟ್‌ಗಳು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next