Advertisement

ವರ್ಕ್‌ ಫ್ರಂ ಹೋಮ್‌ನಲ್ಲಿದ್ದ ಶಿವಮೊಗ್ಗದ ಇಂಜಿನಿಯರ್ ಪಾವಂಜೆ ನದಿಗೆ ಹಾರಿ ಆತ್ಮಹತ್ಯೆ

01:23 PM Feb 16, 2022 | Team Udayavani |

ಹಳೆಯಂಗಡಿ : ಇಲ್ಲಿನ ಮೂಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಇಂಜಿನಿಯರ್ ಓರ್ವ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್‌ನನ್ನು ಶಿವಮೊಗ್ಗ ಮೂಲದ ಸುಚೇಂದ್ರ ಕುಮಾರ್(39) ಎಂದು ತಿಳಿದು ಬಂದಿದೆ. ಶಿವಮೊಗ್ಗದಲ್ಲಿ ಇಂಜಿನಿಯರ್ ಆಗಿ ವೃತ್ತಿ ಮಾಡಿಕೊಂಡಿದ್ದ ಸುಚೇಂದ್ರರ ಪತ್ನಿಯ ಮನೆ ಚೇಳ್ಯಾರಿನಲ್ಲಿದೆ. ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. 12 ಗಂಟೆಯ ಸುಮಾರಿಗೆ ಸೇತುವೆಯಿಂದ ಹಾರಿದ ಮಾಹಿತಿ ಬಂದಿದ್ದು ಸ್ಥಳಕ್ಕೆ ಧಾವಿಸಿದ ಮೂಲ್ಕಿ ಪೊಲೀಸರು ಸ್ಥಳೀಯರ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.

ವರ್ಕ್ ಫ್ರಂ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಇದನ್ನೂ ಓದಿ : ನಾಯಿಯ ನಿಷ್ಠೆ ಇಬ್ರಾಹಿಂಗೆ ಇದೆಯಾ?ಭ್ರಷ್ಟಾಚಾರ ಬೆತ್ತಲುಗೊಳಿಸುತ್ತೇನೆ : ಉಗ್ರಪ್ಪ ಕಿಡಿ

Advertisement

Udayavani is now on Telegram. Click here to join our channel and stay updated with the latest news.

Next