Advertisement

ಎಂಜಿನಿಯರಿಂಗ್‌ ಕಾಲೇಜು ಮುಚ್ಚಿದರೆ ಧರಣಿ

05:59 AM Jun 27, 2020 | Lakshmi GovindaRaj |

ಹಾಸನ: ತಾಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳನ್ನು ಹಾಸನದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿಗೆ ವರ್ಗಾಯಿಸುವಂತೆ ಸರ್ಕಾರ ಆದೇಶ ನೀಡುವ ಮೂಲಕ ಇಲ್ಲಿನ ಕಾಲೇಜು  ಮುಚ್ಚುವ ಹೊನ್ನಾರ ನಡೆಯುತ್ತಿದೆ. ಒಂದು ವೇಳೆ ಮೊಸಳೆಹೊಸಹಳ್ಳಿ ಕಾಲೇಜು ಮುಚ್ಚಿದರೆ ಸಿಎಂ ಮನೆ ಮುಂದೆ ಧರಣಿ ಕೂರಲಾಗುವುದು ಎಂದು ಶಾಸಕ ಎಚ್‌.ಡಿ. ರೇವಣ್ಣ ಎಚ್ಚರಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜಿ. ವೆಂಕಟೇಶಯ್ಯ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬರೆದಿರುವ ಪತ್ರದಲ್ಲಿ ಈ  ಉಲ್ಲೇಖವಿದೆ ಎಂದರು. ಮೊಸಳೆ ಹೊಸಹಳ್ಳಿ ಕಾಲೇಜಿನಲ್ಲಿ 173 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಕಾಲೇಜಿನಿಂದ ಗ್ರಾಮೀಣ ಭಾಗದ ಸಾಕಷ್ಟು ಬಡ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಅನುಕೂಲವಾಗಿದೆ ಎಂದು  ಹೇಳಿದರು.

ದ್ವೇಷದ ರಾಜಕಾರಣ: ದ್ವೇಷದ ರಾಜಕಾರಣದಿಂದ ಕಾಲೇಜನ್ನು ಹಾಸನದ ಎಂಜಿನಿಯರ್‌ ಕಾಲೇಜಿಗೆ ವಿಲೀನ ಗೊಳಿಸುವ ಹುನ್ನಾರ ನಡೆಸಲಾಗಿದೆ, ಯಾವುದೇ ಕಾರಣಕ್ಕೂ ಕಾಲೇಜು ಇಲ್ಲಿಂದ ಸ್ಥಳಾಂತ ಆಗಲು ಬಿಡುವುದಿಲ್ಲ,  ರಾಜ್ಯದಲ್ಲಿ ಹದಿಮೂರು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಇವೆ ಮೊಸಳೆ ಹೊಸಹಳ್ಳಿ ಕಾಲೇಜಿಗಿಂತಲೂ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿರುವ ಕಾಲೇಜು  ಗಳನ್ನು ಬಿಟ್ಟು ನನ್ನ ಕ್ಷೇತ್ರದ ಕಾಲೇಜನ್ನೇ ಗುರಿ ಮಾಡಲಾಗಿದೆ  ಎಂದರು.

ನಮಗೂ ಕಾಲ ಬರಲಿದೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಾಶ್ವತವಾಗಿ ಇರುವುದಿಲ್ಲ. ನಮಗೂ ಕಾಲ ಬರಲಿದೆ. ಇಳಿ ವಯಸ್ಸಿನಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ದ್ವೇಷದ ರಾಜಕಾರಣ ಮಾಡಬಾರದು, ಈ ಕಾಲೇಜು  ಮುಚ್ಚುವುದ ಹಿಂದೆ ಹಾಗೂ ಸಿಎಂಗೆ ಇಲ್ಲಸಲ್ಲದನ್ನು ಕಿವಿಗೆ ತುಂಬಲಾಗುತ್ತಿದೆ. ಇದಕ್ಕೆ ಕಾಲವೇ ಉತ್ತರ ನೀಡಲಿದೆ ಎಂದು ತಿಳಿಸಿದರು.

ಬೀದಿಗಿಳಿದು ಹೋರಾಟ: ಶಿಕ್ಷಣ ಸಚಿವರು ಕಾಲೇಜು ಸ್ಥಳಾಂತರಿಸಲು ಮಾಡಲು ದ್ವೇಷದ ರಾಜಕಾರಣ ಮಾಡಬಾರದು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಅನೇಕ ಕಾಮಗಾರಿಗಳು ನಿಂತು ಹೋಗಿವೆ. ನಿರಾವರಿ ಇಲಾಖೆಯ ಯಾವುದೇ ಕೆಲಸ ನಡೆದಿಲ್ಲ. ಈ ಎಲ್ಲಾ ವಿಚಾರ ಕುರಿತು ಸಿಎಂಗೆ ಪತ್ರ ಬರೆಯಲಾಗುವು ದು ಸಕಾರಾತ್ಮಕ ಪ್ರತಿಕ್ರಿಯೆ ಸಿಗದಿದ್ದರೆ ರಸ್ತೆಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

Advertisement

ರೈತರ ಒಕ್ಕಲೆಬ್ಬಿಸುವ ಹುನ್ನಾರ: ರಾಜ್ಯ ಸರ್ಕಾರ ಭೂ ಮಾಫಿಯಾ, ರಿಯಲ್‌ ಎಸ್ಟೇಟ್‌, ಖಾಸಗಿ ಶಿಕ್ಷಣ ಸಂಸ್ಥೆಗಳು, ಕೈಗಾರಿ ಕೋದ್ಯಮಿಗಳ, ಬಿಲ್ಡರ್‌ ಜತೆ ಶಾಮೀಲಾಗಿದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಾಮಾಣಿಕ ಅಧಿಕಾರಿಗಳಿಗೆ ತೊಂದರೆ: ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕೆಲಸ ಮಾಡಲು ಅವಕಾಶ ಸಿಗುತ್ತಿಲ್ಲ. ಚನ್ನರಾಯಪಟ್ಟಣದ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಒಬ್ಬರು ಅಲ್ಲಿಗೆ ವರ್ಗಾವಣೆ ಮಾಡಿಸಿಕೊಳ್ಳಲು ತಾವು  1.50 ಲಕ್ಷ ರೂ. ಕೊಟ್ಟಿರುವುದಾಗಿ ಹೇಳುತ್ತಾರೆ. ಸಕಲೇಶಪುರದಲ್ಲಿಯೂ ಪ್ರಮಾಣಿಕ ಅಧಿಕಾರಿಗಳನ್ನು ಕೆಲಸ ಮಾಡಲು ಬಿಡುತ್ತಿಲ್ಲ. ಯಾವುದೇ ಕಾಮಗಾರಿಗೂ ಅನುಮೋದನೆ ಪಡೆಯಬೇಕಾದರೆ 5 ರಿಂದ 10 ಪರ್ಸೆಂಟ್‌ ಕಮಿಷನ್‌  ನೀಡಬೇಕಿದೆ. ಸಮ್ಮಿಶ್ರ ಸರ್ಕಾರದ ಆಡಳಿತವಾಧಿಯಲ್ಲಿ ನಮ್ಮನ್ನು ಪರ್ಸಂಟೇಜ್‌ ಸರ್ಕಾರ ಎಂದು ಟೀಕಿಸುತ್ತಿದ್ದರು, ಈಗ ಯಾವುವು ಪರ್ಸೆಂಟೆಸ್‌ ಸರ್ಕಾರ ಎಂಬುದರ ಬಗ್ಗೆ ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ರೇವಣ್ಣ  ವ್ಯಂಗ್ಯವಾಡಿದರು.

ಹಾಸನ ಗಂಡು ಮೆಟ್ಟಿದ ನಾಡು, ನಮ್ಮ ಜಿಲ್ಲೆಯವರನ್ನು ಎದುರು ಹಾಕಿಕೊಂಡರೆ ಯಾವ ಸರ್ಕಾರವು  ಉಳಿಯುವುದಿಲ್ಲ. ಹಿಂದೆ ದೊಡ್ಡಹಳ್ಳಿ ಗೋಲಿಬಾರ್‌ ನಡೆದು ಅಂದಿನ ಸರ್ಕಾರ ಉರುಳಿದ್ದು ಎಲ್ಲರಿಗೂ ಗೊತ್ತಿದೆ.
-ಎಚ್‌.ಡಿ. ರೇವಣ್ಣ, ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next