Advertisement

ಕರ್ನಾಟಕ: ನಾಳೆ ನಡೆಯಬೇಕಿದ್ದ ಎಂಜಿನಿಯರಿಂಗ್- ಪಾಲಿಟೆಕ್ನಿಕ್‌ ಪರೀಕ್ಷೆಗಳು ಮುಂದಕ್ಕೆ

09:37 PM Apr 26, 2021 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೋವಿಡ್ ಕರ್ಫ್ಯೂ’ ಜಾರಿ ಹಿನ್ನೆಲೆಯಲ್ಲಿ‌ ನಾಳೆಯಿಂದ ನಡೆಯಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.

Advertisement

ಈ ಬಗ್ಗೆ ಸೋಮವಾರ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೋವಿಡ್ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೋವಿಡ್ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next