Advertisement

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

12:17 PM Oct 06, 2024 | Team Udayavani |

ಬೆಂಗಳೂರು: ಅಪಾರ್ಟ್‌ಮೆಂಟ್‌ನ ಮಹಡಿ ಯಿಂದ ಕಾಲು ಜಾರಿ ಬಿದ್ದು ಆರ್‌ಟಿಒ ಅಧಿಕಾರಿ ಪುತ್ರಿಯೊಬ್ಬರು ಮೃತಪಟ್ಟಿದ್ದಾರೆ.

Advertisement

ಚಂದ್ರಲೇಔಟ್‌ 2ನೇ ಹಂತದ ನಿಶ್ಚಿತಾ (20) ಮೃತ ಯುವತಿ. ನಿಶ್ಚಿತಾ ತಾಯಿ ಶೋಭಾ ಬೆಂಗಳೂರು ನಗರ ಜಿಲ್ಲೆಯ ಆರ್‌ಟಿಒ ಜಂಟಿ ಆಯುಕ್ತೆಯಾಗಿದ್ದಾರೆ. ಎಂಜಿನಿಯರಿಂಗ್‌ ಓದುತ್ತಿದ್ದ ನಿಶ್ಚಿತಾ ಶುಕ್ರವಾರ ಸಂಜೆ 4 ಗಂಟೆಯ ವೇಳೆ ಇಬ್ಬರು ಗೆಳತಿಯರ ಜತೆ ಮನೆಯ ಟೆರೇಸ್‌ ಮೇಲೆ ಆಟವಾಡುತ್ತಿದ್ದರು. ಈ ವೇಳೆ ಆಯ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಆಕೆಯನ್ನು ಕೆಂಗೇರಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಲೇಔಟ್‌ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಮೃತ ಯುವತಿ ಬೆಂಗಳೂರು ನಗರ ಜಿಲ್ಲೆಯ ಆರ್‌ಟಿಒ ಜಂಟಿ ಆಯುಕ್ತೆ ಶೋಭಾ ಅವರ ಹಿರಿಯ ಪುತ್ರಿ ಆಗಿದ್ದು, ಅವರ 2ನೇ ಪುತ್ರಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶೋಭಾ ಅವರ ಪತಿ ಇನ್‌ಸ್ಪೆಕ್ಟರ್‌ ಆಗಿದ್ದು, ನಾಲ್ಕು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next