Advertisement

ರೈಲಿಗೆ ತಲೆಕೊಟ್ಟು ಎಂಜನಿಯರಿಂಗ್ ವಿದ್ಯಾರ್ಥಿ ಅತ್ಮಹತ್ಯೆ

10:07 AM Aug 20, 2019 | keerthan |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಎಂಜನಿಯರಿಂಗ್ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಅತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ತಾಲೂಕಿನ ಕೆಂದನಹಳ್ಳಿ ನಿವಾಸಿ ಕೆ.ಎನ್.ಅಶೋಕ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ ಓದುತ್ತಿದ್ದ. ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಬಂದ ಅಶೋಕ, ಚಿಂತಾಮಣಿ ನಗರಕ್ಕೆ ಬಂದು ನಗರದ ಚೇಳೂರು ರಸ್ತೆಯ ರೈಲ್ವೆ ಅಂಡರ್ ಪಾಸ್ ಬಳಿ ಚಲಿಸುತ್ತಿದ್ದ ರೈಲ್ವೆಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾರ್ಥಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next