Advertisement

Hubli ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು; ಅರವಿಂದ ಬೆಲ್ಲದ್ ಆಗ್ರಹ

02:51 PM Sep 14, 2023 | Team Udayavani |

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಕಳೆದ ವರ್ಷದಂತೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸದೆ ಕೂಡಲೇ ಅನುಮತಿ ನೀಡುವಂತೆ ಶಾಸಕ ಅರವಿಂದ ಬೆಲ್ಲದ ಒತ್ತಾಯಿಸಿದರು.

Advertisement

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಕುರಿತಾಗಿ ಪಾಲಿಕೆ ಆಯುಕ್ತರೊಂದಿಗೆ ಪಾಲಿಕೆ ಕಚೇರಿಯಲ್ಲಿ ಸದಸ್ಯರು ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ವರ್ಷ ಪಾಲಿಕೆ ಅನುಮತಿ ನೀಡಿತ್ತು. ಶಾಂತಿಯುತವಾಗಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಈ ಬಾರಿಗೆ ಇಷ್ಟೊಂದು ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ದೂರಿದರು.

ಇದನ್ನೂ ಓದಿ:Bank of Barodaದಿಂದ ಭರ್ಜರಿ ಫೆಸ್ಟಿವ್ ಆಫರ್ -‘BOB’ ಸಂಗ್ ತ್ಯೋಹಾರ್ ಕಿ ಉಮಂಗ್’

ಇತ್ತಿಚೆಗೆ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮತಿ ನೀಡುವ ಕುರಿತು ಸದಸ್ಯರು ನಿರ್ಧಾರ ಕೈಗೊಂಡಿದ್ದರು. ಈ ಕುರಿತು ಅನುಷ್ಠಾನ ಆದೇಶ ನೀಡಬೇಕಾದ ಪಾಲಿಕೆ ಆಯುಕ್ತರು ಸರ್ಕಾರ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಈ ವಿಳಂಬದಿಂದ ಅರ್ಜಿ ಸಲ್ಲಿಸಿದ ಸಂಘಟನೆಗಳು ನಮಗೆ ಅನುಮತಿ ಕೊಡಿಸಲು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಸಭೆ ನಡೆಸಿದ್ದೇವೆ. ಹಿಂದೂ ಭಾವನೆಗಳ ಜೊತೆಗೆ ಆಟ ಆಡುವುದು ಸರಿಯಲ್ಲ. ಮುಸ್ಲಿಮರ ಜೊತೆಗೆ ಹಿಂದೂಗಳು ಕೂಡಾ ಮತ ಹಾಕಿದ್ದಾರೆ. ಅನುಮತಿ ಕೊಡದಿದ್ದರೆ ಹಗಲು ರಾತ್ರಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next