Advertisement

Ramaಮಂದಿರದಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ; ಮಾಧವ ದೇವಸ್ಥಾನದಲ್ಲಿ ವಿಶೇಷ ಪೂಜೆ

03:21 PM Jan 20, 2024 | Team Udayavani |

ತೀರ್ಥಹಳ್ಳಿ: ಪಟ್ಟಣದ ಪುರಾಣ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶ್ರೀ ಮಾಧವ ದೇವಸ್ಥಾನದಲ್ಲಿ ಜ.22 ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.

Advertisement

ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತದಲ್ಲಿ ದೇಶಾದ್ಯಂತ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳು ನಡೆಸಲಾಗುತ್ತಿದ್ದು, ತೀರ್ಥಹಳ್ಳಿಯ ಮಾಧವ ದೇವಸ್ಥಾನದಲ್ಲಿ ಸಹ ಹೋಮ ಹವನಗಳು ನಡೆಯಲಿವೆ.

ಬೆಳಗ್ಗೆ 8 ಗಂಟೆಗೆ ಶ್ರೀ ರಾಮನ ಜಪ 10 ಗಂಟೆಗೆ ರಾಮ ತಾರಕ ಹೋಮ  ಮಧ್ಯಾಹ್ನ 12 ಗಂಟೆಗೆ ಪೂರ್ಣ ವತಿ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ, ಹಾಗೂ ಸಂಜೆ 6 ಗಂಟೆಗೆ ತುಂಗಾ ನದಿಯ ದಡದಲ್ಲಿ ಋತ್ವಿಜರಿಂದ ತುಂಗಾ ಆರತಿ ಕಾರ್ಯಕ್ರಮ ಜರುಗಲಿದೆ.

ವರ್ಷದ ನಂತರ ತುಂಗಾ ನದಿ ಎತ್ತರದಲ್ಲಿ ತುಂಗಾ ಆರತಿ ಕಾರ್ಯಕ್ರಮ ನಡೆಯಲಿದ್ದು, ಜನರ ಕಣ್ಮನ ಸೆಳೆಯುವ ಈ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇದೆ ಹಾಗೂ ಈ ಎಲ್ಲಾ ಕಾರ್ಯಕ್ರಮಗಳಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಲು ಸಮಿತಿಯವರು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next