Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರಿಯರು ಮತ್ತು ಯುವ ನಾಯಕರು ಅಖಾಡಕ್ಕೆ ಇಳಿಯುವಂತೆ ಒತ್ತಾಯಿಸಿದ ನಂತರ ನಾನು ಚುನಾವಣಾ ಕಣಕ್ಕೆ ಇಳಿದಿದ್ದೇನೆ ಎಂದು ಹೇಳಿದರು.
Related Articles
Advertisement
‘ಗಾಂಧಿ ಕುಟುಂಬವು ತನಗೆ ಬೆಂಬಲ ನೀಡುತ್ತಿದೆ’ ಎಂಬ ಅಭಿಪ್ರಾಯಗಳ ನ್ನು ಖರ್ಗೆ ತಿರಸ್ಕರಿಸಿ, ಇತರ ನಾಯಕರು ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ ಎಂದರು.
ವಕ್ತಾರ ಸ್ಥಾನಕ್ಕೆ ರಾಜೀನಾಮೆ
ಇದೆ ವೇಳೆ ದೀಪೇಂದರ್ ಹೂಡಾ, ಮತ್ತು ಸೈಯದ್ ನಾಸೀರ್ ಹುಸೇನ್ ಅವರೊಂದಿಗೆ ಕಾಂಗ್ರೆಸ್ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಖರ್ಗೆ ಪರ ಪ್ರಚಾರ ಮಾಡುವುದಾಗಿ ಗೌರವ್ ವಲ್ಲಭ್ ಹೇಳಿದರು.ಖರ್ಗೆ ಅವರು ನಿರಂತರತೆ ಮತ್ತು ಯಥಾಸ್ಥಿತಿಯ ಅಭ್ಯರ್ಥಿಯಾಗಿದ್ದಾರೆ ಎಂದರು.
ಅಕ್ಟೋಬರ್ 8 ರಂದು ಅಂತಿಮ ಪಟ್ಟಿ
ಕಾಂಗ್ರೆಸ್ ಗುರುವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಸೆಪ್ಟೆಂಬರ್ 24 ರಿಂದ 30 ರವರೆಗೆ ಇತ್ತು.ಜಾರ್ಖಂಡ್ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಅವರ ನಾಮಪತ್ರ ಶನಿವಾರ ತಿರಸ್ಕೃತಗೊಂಡ ನಂತರ ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ ಮತ್ತು ತರೂರ್ ಕಣದಲ್ಲಿ ಉಳಿದಿದ್ದಾರೆ. ನಾಮಪತ್ರಗಳ ಪರಿಶೀಲನೆಗೆ ಅಕ್ಟೋಬರ್ 1 ರಂದು ದಿನಾಂಕವಾಗಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ.ಅಕ್ಟೋಬರ್ 8 ರಂದು ಸಂಜೆ 5 ಗಂಟೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅಗತ್ಯ ಬಿದ್ದರೆ ಅಕ್ಟೋಬರ್ 17 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. 9,000ಕ್ಕೂ ಹೆಚ್ಚು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳು ಮತದಾನದಲ್ಲಿ ಮತ ಚಲಾಯಿಸಲಿದ್ದಾರೆ.