Advertisement

ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ : ತಲಪಾಡಿ ಪ್ರದೇಶದಲ್ಲಿ ಬಿಗಿ ತಪಾಸಣೆ

01:22 PM Aug 03, 2021 | Team Udayavani |

ಮಂಗಳೂರು : ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಿರುವುದರಿಂದ ಗೊಂದಲ ಉಂಟಾಗಿರುವ  ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ನಡುವಿನ ಗಡಿ ಪ್ರದೇಶ ತಲಪಾಡಿಗೆ ಎಡಿಜಿಪಿ ಪ್ರತಾಪ ರೆಡ್ಡಿ ಮಂಗಳವಾರ ಭೇಟಿ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕರ್ನಾಟಕ ಪ್ರವೇಶಿಸಲು ನೆಗೆಟಿವ್ ವರದಿ ಕಡ್ಡಾಯ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿದರೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ತುರ್ತು ಕಾರಣಕ್ಕೆ ಮಾತ್ರ ಸಂಚಾರ ಅವಕಾಶವಿದೆ. ರೈಲು ನಿಲ್ದಾಣಗಳಲ್ಲಿಯೂ ಬಿಗಿ ತಪಾಸಣೆ ಮುಂದುವರಿಯಲಿದೆ.

ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಕೇರಳದ ಅಧಿಕಾರಿಗಳ ಜತೆಯೂ ಸಂವಹನ ನಡೆಸಲಾಗುತ್ತಿದೆ. ಕೇರಳದಲ್ಲಿ ಕೊರೊನಾ ಕಡಿಮೆಯಾಗುವವರೆಗೂ ಗಡಿಯಲ್ಲಿ ಕಠಿಣ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next