Advertisement

ಮೀಸಲು ಅರಣ್ಯದಲ್ಲಿ ಮ್ಯಾರಥಾನ್ ಗೆ ಪರಿಸರ ಪ್ರಿಯರ ವಿರೋಧ

10:00 AM Nov 27, 2021 | Team Udayavani |

ಮೂಡಿಗೆರೆ: ‘ದಿ ಮಲ್ನಾಡ್ ಅಲ್ಟ್ರಾ’ ಎಂಬ ಸಂಸ್ಥೆ ಮೂಡಿಗೆರೆಯ ಎತ್ತಿನಭುಜ ಗುಡ್ಡದ ವ್ಯಾಪ್ತಿಯಲ್ಲಿ ಇಂದಿನಿಂದ ಮ್ಯಾರಥಾನ್ ಅನ್ನು ಆಯೋಜಿಸಿದ್ದು, ಮೀಸಲು ಅರಣ್ಯದಲ್ಲಿ ಮ್ಯಾರಥಾನ್ ಅಯೋಜನೆಗೆ  ಪರಿಸರ ಪ್ರಿಯರು ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ಈ ಮ್ಯಾರಥಾನ್ ಪಶ್ಚಿಮಘಟ್ಟ ಮೀಸಲು ಅರಣ್ಯದಲ್ಲಿ ಹಾದು ಹೋಗುವುದರಿಂದ ಪರಿಸರ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಜನ ಒಟ್ಟಿಗೆ ಚಟುವಟಿಕೆ ಪ್ರಾರಂಭಿಸಿದರೆ ಪರಿಸರ ಸೂಕ್ಷ್ಮ ಪ್ರದೇಶಗಳಿಗೆ ಹಾನಿ ಉಂಟಾಗುತ್ತದೆ. ಇವರ ಶೌಚ ಕ್ರಿಯೆಯಿಂದಾಗಿ ಅಲ್ಲಿನ ಜಲಮೂಲಗಳು ಕಲುಷಿತಗೊಳ್ಳುತ್ತದೆ. ಜಿಲ್ಲಾಡಳಿತ, ಅರಣ್ಯ ಇಲಾಖೆ ಇಂತಹ ದೊಡ್ಡ ಕಾರ್ಯಕ್ರಮಕ್ಕೆ ಹೇಗೆ  ಅನುಮತಿ ನೀಡಿತು.? ನಮ್ಮ ಪ್ರಶ್ನೆಗಳಿಗೆ ಜಿಲ್ಲಾ ಉಪಸಂರಕ್ಷಣಾಧಿಕಾರಿಗಳು ಬರೀ ಹಾರಿಕೆಯ ಉತ್ತರವನ್ನಷ್ಟೇ ನೀಡುತ್ತಿದ್ದಾರೆ ಎಂದು ಪರಿಸರ ಪ್ರೇಮಿಗಳು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next