Advertisement

2014 ಕ್ಕಿಂತ ಮೊದಲು ಭ್ರಷ್ಟಾಚಾರ ಮತ್ತು ಹಗರಣಗಳ ಯುಗ : ಪ್ರಧಾನಿ ಮೋದಿ

04:18 PM Aug 21, 2023 | Team Udayavani |

ಹೊಸದಿಲ್ಲಿ: 2014ಕ್ಕಿಂತ ಮೊದಲು ಭ್ರಷ್ಟಾಚಾರ ಮತ್ತು ಹಗರಣಗಳ ಯುಗವಿತ್ತು. ಬಡವರ ಹಕ್ಕುಗಳು ಮತ್ತು ಅವರ ಹಣವನ್ನು ದರೋಡೆ ಮಾಡಲಾಯಿತು, ಆದರೆ ಈಗ ಪ್ರತಿ ಪೈಸೆಯೂ ನೇರವಾಗಿ ಅವರ ಖಾತೆಗಳಿಗೆ ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

Advertisement

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಸಿಎಮ್ ರೈಸ್ ಸರಕಾರಿ ಮಹಾತ್ಮ ಗಾಂಧಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹೊಸದಾಗಿ ನೇಮಕಗೊಂಡ ಶಿಕ್ಷಕರ ತರಬೇತಿ-ಕಮ್-ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಮಾತನಾಡಿದರು.

ಹೆಚ್ಚಿನ ಸಂಖ್ಯೆಯ ಜನರು ತೆರಿಗೆ ಪಾವತಿಸುತ್ತಿದ್ದಾರೆ ಎಂದು ಅಂಕಿಅಂಶಗಳು ತೋರಿಸುತ್ತವೆ, ಇದು ಅವರ ಹಣವನ್ನು ಸದುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಸರಕಾರದ ಮೇಲಿನ ನಂಬಿಕೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next