Advertisement

ಸಿಎಂಗೆ ಈಶ್ವರ್‌ ಖಂಡ್ರೆ ಪತ್ರ

11:05 PM Jun 26, 2019 | Team Udayavani |

ಬೆಂಗಳೂರು: ಬೀದರ ಜಿಲ್ಲೆಯ ಉಜಳಂಬದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಆಗಮಿಸುತ್ತಿರುವುದರಿಂದ ಜಿಲ್ಲೆಯ ಸಮಸ್ಯೆಗಳನ್ನು ಪರಿಹರಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

Advertisement

ಬಸವ ಕಲ್ಯಾಣದಲ್ಲಿ 12ನೇ ಶತಮಾನದ ಶರಣರ ಅನುಭವ ಮಂಟಪ ನಿರ್ಮಾಣ ಮಾಡಲು ಹಿಂದಿನ ಸರ್ಕಾರ ತೀರ್ಮಾನ ತೆಗೆದುಕೊಂಡಿತ್ತು. ಅದಕ್ಕಾಗಿ 100 ಕೋಟಿ ರೂ.ಅನುದಾನ ನೀಡಿ, ಗೊ.ರು.ಚನ್ನಬಸಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕಾರ್ಯಾರಂಭ ಮಾಡಲು ಸೂಚನೆ ನೀಡಲಾಗಿತ್ತು. ಆದರೆ, ಇದುವರೆಗೂ ಕಾಮಗಾರಿ ಆರಂಭವಾಗಿಲ್ಲ.

ಅನುಭವ ಮಂಟಪ ನಿರ್ಮಾಣಕ್ಕೆ ಘೋಷಣೆ ಮಾಡಿ, ಕೆಲಸ ಪ್ರಾರಂಭಿಸಬೇಕು. ಕಾರಂಜಾ ಮುಳುಗಡೆ ಸಂತ್ರಸ್ಥರ ಬೇಡಿಕೆಗಳನ್ನು ಈಡೇರಿಸಿ ಶಾಶ್ವತ ಪರಿಹಾರ ಒದಗಿಸಬೇಕು. ಬಿ.ಆರ್‌.ಅಂಬೇಡ್ಕರ್‌ ವಸತಿ ಯೋಜನೆ ಅಡಿಯಲ್ಲಿ ಹಿಂದಿನ ಸರ್ಕಾರ ಮನೆಗಳನ್ನು ಮಂಜೂರು ಮಾಡಿದೆ.

ಆದರೆ, ಸೂಕ್ತ ಅನುದಾನ ಬಿಡುಗಡೆಯಾಗದೇ ಫ‌ಲಾನುಭವಿಗಳು ಗುಡಿಸಲಿನಲ್ಲಿ ವಾಸಿಸುವಂತಾಗಿದೆ. ಈ ಫ‌ಲಾನುಭವಿಗಳಿಗೆ ಶೀಘ್ರವೇ ಅನುದಾನ ಬಿಡುಗಡೆಗೊಳಿಸಬೇಕು ಹಾಗೂ ಬೀದರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next