Advertisement

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

08:38 PM Sep 19, 2024 | Team Udayavani |

ಬೆಂಗಳೂರು: ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಹಾಗೂ ಗೋವಾ ಸರ್ಕಾರ ಹಸಿರು ನಿಶಾನೆ ತೋರುವವರೆಗೂ ಗೋವಾ-ತಮ್ಮಾರ್‌ ವಿದ್ಯುತ್‌ ಮಾರ್ಗಕ್ಕಾಗಿ ರಾಜ್ಯದ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ  ಮರ ಕಡಿಯುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದೃಢಪಡಿಸಿದ್ದಾರೆ.

Advertisement

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಯೋಜನೆಯ ಬಗ್ಗೆ ಪ್ರಸ್ತಾಪ ಬಂದಾಗ ಸುಮಾರು 1 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಯೋಜನೆಗೆ ಅನುಮತಿ ನೀಡದಂತೆ ಸೂಚಿಸಿದ್ದೇನೆ. ಆದರೆ, ಅಂತಾರಾಜ್ಯಗಳಿಗೆ ಸಂಬಂಧಪಟ್ಟ ಮಹತ್ವದ ಕಾಮಗಾರಿಗಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಪ್ರಶ್ನಿಸಿದ್ದರು. ಅಂತಿಮವಾಗಿ 13 ಸಾವಿರ ಮರಗಳನ್ನು ಕಡಿಯಲು ಒಪ್ಪಿಗೆ ಕೊಡಿ ಎಂದು ಪರಿಷ್ಕೃತ ಪ್ರಸ್ತಾಪ ಸಲ್ಲಿಸಿದ್ದಾರೆ. ಆದರೆ, ಎಲ್ಲಿಯವರೆಗೆ ಗೋವಾ ಹಾಗೂ ಕೇಂದ್ರ ಸರ್ಕಾರ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವುದಿಲ್ಲವೋ, ಅಲ್ಲಿಯವರೆಗೆ ನಾವು ಈ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಶೀಘ್ರ ವರದಿ: ಎತ್ತಿನಹೊಳೆ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಪರಿಸರ ಇಲಾಖೆ ಸ್ಪಷ್ಟನೆ ಕೇಳಿದೆ. ಇದಕ್ಕೆ ಉಪಯೋಗಿ ಇಲಾಖೆ ಮಾಹಿತಿ ನೀಡಬೇಕಾಗುತ್ತದೆ. ನಾವು ಕಾಯುತ್ತಿದ್ದೇವೆ. ಜಲಸಂಪನ್ಮೂಲ ಇಲಾಖೆ ವರದಿ ನೀಡಿದ ತಕ್ಷಣ ವರದಿ ಸಲ್ಲಿಸುತ್ತೇವೆ. ಅದೇ ರೀತಿ ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಸಂಬಂಧಪಟ್ಟಂತೆ ಇಂಧನ ಇಲಾಖೆಯ ಜತೆಗೆ ಒಮ್ಮೆ ಮಾತ್ರ ಜಂಟಿ ಸಭೆಯಾಗಿದೆ. ಪ್ರಸ್ತಾಪ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ ತನ್ನ ನಿಲುವು ತಿಳಿಸುತ್ತದೆ ಎಂದು ಹೇಳಿದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next