Advertisement

“ಆಪರೇಷನ್‌ ಕಮಲ’ಶಾಸಕರು ವಾಪಸ್‌ ಬಂದರೆ ಸೇರ್ಪಡೆ: ಖಂಡ್ರೆ

08:19 PM Nov 03, 2022 | Team Udayavani |

ಬೀದರ: ಬಿಜೆಪಿಗೆ ವಲಸೆ ಹೋಗಿರುವ ಸಚಿವರು ಹಾಗೂ ಶಾಸಕರು ತಾವು ಮಾಡಿರುವ ತಪ್ಪಿಗೆ ಪಶ್ಚಾತ್ತಾಪ ಪಟ್ಟು ಬಂದರೆ, ಪಕ್ಷದ ಪರಿಶೀಲನಾ ಸಮಿತಿ ಒಪ್ಪಿದರೆ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುವುದು. ಅಲ್ಲದೇ ಮಾಜಿ ಸಚಿವ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಡಾ| ಮಲ್ಲಿಕಾರ್ಜುನ ಖರ್ಗೆ ಅವರಿಗೆ ನ.6ರಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಪ್ಯಾಲೇಸ್‌ ಗ್ರೌಂಡ್‌ನ‌ಲ್ಲಿ ಅಭಿನಂದನಾ ಸಮಾರಂಭ ಮತ್ತು ಸರ್ವೋದಯ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಬೀದರ ಜಿಲ್ಲೆಯಿಂದ ಸುಮಾರು 15 ಸಾವಿರ ಜನ ಸೇರಿ ಕಲ್ಯಾಣ ಕರ್ನಾಟಕ ಭಾಗದಿಂದ ಸಾವಿರಾರು ಜನ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದರು.

ದೇಶದಲ್ಲಿ ಭ್ರಷ್ಟಾಚಾರ ಎಲ್ಲೆ ಮೀರಿದ್ದು, ಅರಾಜಕತೆ ಮತ್ತು ಭಯದ ವಾತಾವರಣ ಸೃಷ್ಟಿಯಾಗಿದೆ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಂತಿ, ನೆಮ್ಮದಿ ನಿರ್ಮಾಣ ಮಾಡುವ ಪಣ ತೊಡಲು ಕಾರ್ಯಕರ್ತರಿಗೆ ಸಂದೇಶ ನೀಡಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next