Advertisement

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

05:40 PM Apr 24, 2024 | Team Udayavani |

ಸಾಗರ: ನನಗೆ ಅತ್ಯಂತ ಸಂತೋಷ ಕೊಡುವ ರೈತನ ಚಿಹ್ನೆ ಸಿಕ್ಕಿದ್ದು, ಚುನಾವಣೆಯಲ್ಲಿ ಅತಿ ಹೆಚ್ಚಿನ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.

Advertisement

ಇಲ್ಲಿನ ರಾಷ್ಟ್ರಭಕ್ತರ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕರ್ತರೊಂದಿಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ನಾಮಪತ್ರ ವಾಪಾಸ್ ಪಡೆಯುತ್ತಾರೆ ಎಂದು ವಿಜಯೇಂದ್ರ ಹಾಗೂ ರಾಘವೇಂದ್ರ ಹೇಳುತ್ತಾ ಬಂದಿದ್ದರು. ಈಗ ಚಿಹ್ನೆಯೂ ಸಿಕ್ಕಿರುವುದರಿಂದ ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ಮಾಡುತ್ತಾರೆ, ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಮೂಡಿದೆ ಎಂದು ಹೇಳಿದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರ ಬಗ್ಗೆ ತೀವ್ರ ಆಕ್ರೋಶ ಜನರಲ್ಲಿದೆ. ಜನರ ಆಕ್ರೋಶ ವ್ಯರ್ಥವಾಗಬಾರದು. ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಭಾರತೀಯ ಜನತಾ ಪಕ್ಷ ಶುದ್ಧೀಕರಣವಾಗಬೇಕು ಎನ್ನುವ ಸಂಕಲ್ಪ ಇರಿಸಿಕೊಂಡು ಹೋರಾಟ ಮಾಡುತ್ತಿರುವ ನನಗೆ ಹೆಚ್ಚಿನ ಬೆಂಬಲ ಸಿಕ್ಕಿದೆ ಎಂದರು.

ಜನರು ಸ್ವಯಂಪ್ರೇರಿತವಾಗಿ ನನ್ನ ಚಿಹ್ನೆಯನ್ನು ತಮ್ಮ ವಾಟ್ಸಪ್, ಸ್ಟೇಟಸ್‌ಗಳಲ್ಲಿ ಹಾಕಿಕೊಂಡು ಕ್ಷೇತ್ರದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ಜನರು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಮತಪರಿವರ್ತನೆ ಮಾಡುವ ಮೂಲಕ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಸದ್ಯ ನಾನೇ ಬಲಾಢ್ಯ ಅಭ್ಯರ್ಥಿ. ಹಣ ಹಂಚಿದರೂ ಬಿ.ವೈ.ರಾಘವೇಂದ್ರ ಗೆಲ್ಲುವುದಿಲ್ಲ. ಜನ ರಾಘವೇಂದ್ರನ ಹತ್ತಿರ ದುಡ್ಡು ತೆಗೆದುಕೊಳ್ಳುತ್ತಾರೆ. ಈಶ್ವರಪ್ಪನಿಗೆ ಓಟು ಹಾಕುತ್ತಾರೆ. ಹಣಬಲ ಈ ಚುನಾವಣೆಯಲ್ಲಿ ಯಶಸ್ಸು ಪಡೆಯುವುದಿಲ್ಲ ಎಂದರು.

Advertisement

ಕಾರ್ಯಕ್ರಮದಲ್ಲಿ ಎಸ್.ವಿ.ಕೃಷ್ಣಮೂರ್ತಿ, ಎಸ್.ಎಲ್.ಮಂಜುನಾಥ್, ಸತೀಶ್ ಗೌಡ ಅದರಂತೆ, ಗೌರೀಶ್ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next