Advertisement

ಈಶ್ವರಪ್ಪಗೆ ನರ, ಗಂಡಸ್ತನ ಯಾವುದೂ ಗೊತ್ತಿಲ್ಲ: ಡಿಕೆಸು

11:22 PM May 15, 2019 | Lakshmi GovindaRaj |

ಹುಬ್ಬಳ್ಳಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರಿಗೆ ನರ ಯಾವುದು, ಗಂಡಸ್ತನ ಯಾವುದು ಎನ್ನುವುದೇ ಗೊತ್ತಿಲ್ಲ ಎಂದು ಸಂಸದ ಡಿ.ಕೆ.ಸುರೇಶ ತಿರುಗೇಟು ನೀಡಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಈಶ್ವರಪ್ಪ ಯಾವತ್ತೂ ಒಳ್ಳೆಯ ಮಾತುಗಳನ್ನಾಡಿಲ್ಲ. ಅವರಿಗೆ ಮೆದುಳು ಸರಿಯಿಲ್ಲ. ಸಿದ್ದರಾಮಯ್ಯ ಹೇಳಿದಂತೆ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು. ಮೇ 23ರ ನಂತರ ದೇಶದಲ್ಲಿ ಖಂಡಿತ ರಾಜಕೀಯ ಬದಲಾವಣೆ ಆಗುತ್ತದೆ. ಕುಂದಗೋಳ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next