Advertisement

“ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ’: ಕುಮಾರಸ್ವಾಮಿ

11:12 PM Feb 18, 2022 | Team Udayavani |

ಬೆಂಗಳೂರು: ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ. ಆದರೆ, ಪ್ರತಿಷ್ಠೆಗೆ ಬಿದ್ದು ಮಂತ್ರಿಯ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್‌ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ಅನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next