Advertisement

ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಲು ಡಿಕೆಶಿ ಒತ್ತಾಯ

01:20 PM Dec 01, 2021 | Team Udayavani |

ಬೆಂಗಳೂರು: ಕೈಗಾರಿಕಾ ಸಚಿವ ಮುಖ್ಯಮಂತ್ರಿ ಯಾಗುತ್ತಾರೆ ಎಂದು ಹೇಳಿರುವ ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲವೇ ಸಿಎಂ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ.

Advertisement

ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಿರಾಣಿ ಸಿಎಂ ಆಗ್ತಾರೆ ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸುತ್ತ, “ಈ ವಿಚಾರದಲ್ಲಿ ಚರ್ಚೆ ಬೇಡ. ಈಶ್ವರಪ್ಪ ಅವರು ಹಿರಿಯ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ, ಉಪಮುಖ್ಯಮಂತ್ರಿ ಆಗಿದ್ದವರು.

ಇದನ್ನೂ ಓದಿ;- ಸಚಿವರ ಮನವಿಗೂ ಕ್ಯಾರೆ ಎನ್ನಲಿಲ್ಲ..!

ಪಕ್ಷದಲ್ಲಿ ವ್ಯಾಪಕವಾಗಿ ಆಗುವ ಚರ್ಚೆ ಬಗ್ಗೆ ಹೇಳಿದ್ದಾರೆ. ಮುಖ್ಯಮಂತ್ರಿಗಳು ಅವರನ್ನು ಸಂಪುಟದಿಂದ ಕೈ ಬಿಡಬೇಕು, ಇಲ್ಲವೇ ಅವರೇ ರಾಜೀನಾಮೆ ನೀಡಬೇಕು. ಸರ್ಕಾರದಲ್ಲಿರುವವರೆ ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದ ಮೇಲೆ, ಅವರ ನಾಯಕತ್ವದ ಮೇಲೆ ನಂಬಿಕೆ ಇಲ್ಲ ಎಂಬುದು ಸಾಬೀತಾದಂತಾಗಿದೆ.

ಅಮಿತ್‌ ಶಾ ಅವರು ಬೊಮ್ಮಾಯಿ ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎಂದು ಹೇಳುತ್ತಾರೆ. ಆದರೆ ಇವರು ನಿರಾಣಿ ಸಿಎಂ ಆಗುತ್ತಾರೆ ಎನ್ನುತ್ತಾರೆ. ಆ ಪಕ್ಷದಲ್ಲಿ ಯಾವುದೂ ಸರಿಯಿಲ್ಲ ಎಂದು ಇದರಿಂದ ಗೊತ್ತಾಗುತ್ತದೆ’ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next